ಇಡೀ ಜಗತ್ತು ಇಂದು ಶಾಂತಿ- ನೆಮ್ಮದಿಗಾಗಿ ಹಪಹಪಿಸುತ್ತಿದ್ದು, ವಿಶ್ವಾದ್ಯಂತ ಜನ ಮನಃಶಾಂತಿಯ ಹುಡುಕಾಟದಲ್ಲಿದ್ದಾರೆ. ಆದರೆ ಶ್ರದ್ಧಾಭಕ್ತಿಯ ಪೂಜೆಯಿಂದ ಪರಮಾನಂದ ಪಡೆಯಬಹುದು ಎಂಬ ಸತ್ಯದರ್ಶನ ಅವರಿಗೆ ಆಗುತ್ತಿಲ್ಲ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.
ಅವರು ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಸೋಮಪ್ರದೋಷದಂದು ಲೋಕ ಹಿತಕ್ಕಾಗಿ ನಡೆದ ಅತ್ಯಪರೂಪದ ಸೋಮ ಸಪರ್ಯಾ ಧರ್ಮಸಭೆಯಲ್ಲಿಆಶೀರ್ಚನ ನೀಡಿದರು. “ಶಿವ ಶೂಲಪಾಣಿಯಾಗಿ ಪ್ರದೋಷದಂದು ಸಂಚಾರ ಮಾಡುತ್ತಾನೆ ಎಂಬ ಪ್ರತೀತಿ ಇದೆ. ಈ ಸಂದರ್ಭ ವಿಶೇಷ ಸಪರ್ಯ ನಡೆದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ರುದ್ರಪಾಠಕರು ರುದ್ರಪಠಣ ಮಾಡಿದ್ದಾರೆ. ರುದ್ರದ ಶಕ್ತಿ ಅದ್ಭುತ. ರುದ್ರಾಧ್ಯಾಯ ಎನ್ನುವುದು ಎಲ್ಲರ ಪಾಲಿಗೆ ಮಾಣಿಕ್ಯ. ಅತಿರುದ್ರ, ಮಹಾರುದ್ರಕ್ಕೂ ಮಿಗಿಲಾದ ಸೇವೆ ಇಂದು ಸಂದಿವೆ. 21600 ರುದ್ರಜಪ ನಡೆದಿದೆ. ಅಭಿಷೇಕದ ಎರಡು ಕೈಗಳ ಹಿಂದೆ ಹಲವು ಹೃದಯ, ಭಾವ, ಭಕ್ತಿಗಳು ಸೇರಿವೆ. ಶಿವನ ಅನುಗ್ರಹದಿಂಧ ಯಶಸ್ಸು- ಶ್ರೇಯಸ್ಸು, ಆನಂದ ಸುಖ ಲಭಿಸುತ್ತದೆ. ಭಕ್ತಜನರನ್ನು ಸಾಧನ ಮಾಡಿಕೊಂಡು ಚಂದ್ರಮೌಳೀಶ್ವರ ದೇಶಕ್ಕೆ ಬೆಳದಿಂಗಳು ಕರುಣಿಸಲಿ. ಚಂದ್ರಪ್ರಕಾಶದ ಬೆಳಕು ದೇಶಕ್ಕೆ ಹರಿಯಲಿ. ಪ್ರತಿಯೊಬ್ಬರ ಹೃದಯದಲ್ಲೂ ಅರಿವಿನ ದೀಪ ಬೆಳಗಿ ಇಡೀ ದೇಶಕ್ಕೆ ದೀಪೋತ್ಸವವನ್ನು ಶ್ರೀ ಚಂದ್ರಮೌಳೀಶ್ವರ ಕರುಣಿಸಲಿ” ಎಂದು ಆಶಿಸಿದರು.
ಗೃಹ ಸಚಿವ ಅರಗ ಜ್ಞಾನೇಂದ್ರ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಮ್ಮುಡಿ ಷಡಕ್ಷರ ದೇಶಿಕೇಂದ್ರ ಸ್ವಾಮೀಜಿ, ಡಾ.ಕೆ.ಎಲ್.ಶಂಕರನಾರಾಯಣ ಜೋಯಿಸ್, ಹೊರನಾಡು ಕ್ಷೇತ್ರದ ಧರ್ಮದರ್ಶಿ ಡಾ.ಭೀಮೇಶ್ವರ ಜೋಶಿ, ಸಿಗಂಧೂರು ಕ್ಷೇತ್ರದ ಪ್ರಧಾನ ಅರ್ಚಕ ಶೇಷಗಿರಿ ಭಟ್, ವಾಸ್ತು ತಜ್ಞ ಮಹೇಶ್ ಮುನಿಯಂಗಳ, ಶಾಸಕರಾದ ಹರತಾಳು ಹಾಲಪ್ಪ, ಬೆಳ್ಳಿ ಪ್ರಕಾಶ್, ಸುಕುಮಾರ್ ಶೆಟ್ಟಿ, ದತ್ತಾತ್ರೇಯ ಶಿವಮೊಗ್ಗ, ಅಖಿಲ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ,ಆರ್ ಎಸ್ ಎಸ್ ಮುಖಂಡ ಪಿ.ಎಸ್.ಪ್ರಕಾಶ್, ದಾನಿ ಹೊಸಪೇಟೆ ಶ್ರೀನಿವಾಸ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಸಭಾಪೂಜೆ ನೆರವೇರಿಸಿದರು. ಚಂದ್ರಮೌಳೀಶ್ವರ ಪ್ರಕಲ್ಪದ ಮುಖ್ಯಸ್ಥ ಹರಿಪ್ರಸಾದ್ ಪೆರಿಯಾಪು ವಂದಿಸಿದರು. ಶ್ರೀಮಠದ ಧರ್ಮ ಕರ್ಮ ವಿಭಾಗದ ಶ್ರೀ ಸಂಯೋಜಕ ಕೂಟೇಲು ರಾಮಕೃಷ್ಣ ಭಟ್ ನಿರೂಪಿಸಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…