Advertisement
ಸುದ್ದಿಗಳು

ಶಾಂತಿ- ನೆಮ್ಮದಿಗೆ ಶ್ರದ್ಧಾಭಕ್ತಿಯ ಪೂಜೆಯೇ ಸಾಧನ : ರಾಘವೇಶ್ವರ ಶ್ರೀ

Share

ಇಡೀ ಜಗತ್ತು ಇಂದು ಶಾಂತಿ- ನೆಮ್ಮದಿಗಾಗಿ ಹಪಹಪಿಸುತ್ತಿದ್ದು, ವಿಶ್ವಾದ್ಯಂತ ಜನ ಮನಃಶಾಂತಿಯ ಹುಡುಕಾಟದಲ್ಲಿದ್ದಾರೆ. ಆದರೆ ಶ್ರದ್ಧಾಭಕ್ತಿಯ ಪೂಜೆಯಿಂದ ಪರಮಾನಂದ ಪಡೆಯಬಹುದು ಎಂಬ ಸತ್ಯದರ್ಶನ ಅವರಿಗೆ ಆಗುತ್ತಿಲ್ಲ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.

ಅವರು ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಸೋಮಪ್ರದೋಷದಂದು ಲೋಕ ಹಿತಕ್ಕಾಗಿ ನಡೆದ ಅತ್ಯಪರೂಪದ ಸೋಮ ಸಪರ್ಯಾ ಧರ್ಮಸಭೆಯಲ್ಲಿಆಶೀರ್ಚನ ನೀಡಿದರು. “ಶಿವ ಶೂಲಪಾಣಿಯಾಗಿ ಪ್ರದೋಷದಂದು ಸಂಚಾರ ಮಾಡುತ್ತಾನೆ ಎಂಬ ಪ್ರತೀತಿ ಇದೆ. ಈ ಸಂದರ್ಭ ವಿಶೇಷ ಸಪರ್ಯ ನಡೆದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ರುದ್ರಪಾಠಕರು ರುದ್ರಪಠಣ ಮಾಡಿದ್ದಾರೆ. ರುದ್ರದ ಶಕ್ತಿ ಅದ್ಭುತ. ರುದ್ರಾಧ್ಯಾಯ ಎನ್ನುವುದು ಎಲ್ಲರ ಪಾಲಿಗೆ ಮಾಣಿಕ್ಯ. ಅತಿರುದ್ರ, ಮಹಾರುದ್ರಕ್ಕೂ ಮಿಗಿಲಾದ ಸೇವೆ ಇಂದು ಸಂದಿವೆ. 21600 ರುದ್ರಜಪ ನಡೆದಿದೆ. ಅಭಿಷೇಕದ ಎರಡು ಕೈಗಳ ಹಿಂದೆ ಹಲವು ಹೃದಯ, ಭಾವ, ಭಕ್ತಿಗಳು ಸೇರಿವೆ. ಶಿವನ ಅನುಗ್ರಹದಿಂಧ ಯಶಸ್ಸು- ಶ್ರೇಯಸ್ಸು, ಆನಂದ ಸುಖ ಲಭಿಸುತ್ತದೆ. ಭಕ್ತಜನರನ್ನು ಸಾಧನ ಮಾಡಿಕೊಂಡು ಚಂದ್ರಮೌಳೀಶ್ವರ ದೇಶಕ್ಕೆ ಬೆಳದಿಂಗಳು ಕರುಣಿಸಲಿ. ಚಂದ್ರಪ್ರಕಾಶದ ಬೆಳಕು ದೇಶಕ್ಕೆ ಹರಿಯಲಿ. ಪ್ರತಿಯೊಬ್ಬರ ಹೃದಯದಲ್ಲೂ ಅರಿವಿನ ದೀಪ ಬೆಳಗಿ ಇಡೀ ದೇಶಕ್ಕೆ ದೀಪೋತ್ಸವವನ್ನು ಶ್ರೀ ಚಂದ್ರಮೌಳೀಶ್ವರ ಕರುಣಿಸಲಿ” ಎಂದು ಆಶಿಸಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಮ್ಮುಡಿ ಷಡಕ್ಷರ ದೇಶಿಕೇಂದ್ರ ಸ್ವಾಮೀಜಿ, ಡಾ.ಕೆ.ಎಲ್.ಶಂಕರನಾರಾಯಣ ಜೋಯಿಸ್, ಹೊರನಾಡು ಕ್ಷೇತ್ರದ ಧರ್ಮದರ್ಶಿ ಡಾ.ಭೀಮೇಶ್ವರ ಜೋಶಿ, ಸಿಗಂಧೂರು ಕ್ಷೇತ್ರದ ಪ್ರಧಾನ ಅರ್ಚಕ ಶೇಷಗಿರಿ ಭಟ್, ವಾಸ್ತು ತಜ್ಞ ಮಹೇಶ್ ಮುನಿಯಂಗಳ, ಶಾಸಕರಾದ ಹರತಾಳು ಹಾಲಪ್ಪ, ಬೆಳ್ಳಿ ಪ್ರಕಾಶ್, ಸುಕುಮಾರ್ ಶೆಟ್ಟಿ, ದತ್ತಾತ್ರೇಯ ಶಿವಮೊಗ್ಗ, ಅಖಿಲ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ,ಆರ್‌ ಎಸ್‌ ಎಸ್‌ ಮುಖಂಡ ಪಿ.ಎಸ್.ಪ್ರಕಾಶ್, ದಾನಿ ಹೊಸಪೇಟೆ ಶ್ರೀನಿವಾಸ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಸಭಾಪೂಜೆ ನೆರವೇರಿಸಿದರು. ಚಂದ್ರಮೌಳೀಶ್ವರ ಪ್ರಕಲ್ಪದ ಮುಖ್ಯಸ್ಥ ಹರಿಪ್ರಸಾದ್ ಪೆರಿಯಾಪು ವಂದಿಸಿದರು. ಶ್ರೀಮಠದ ಧರ್ಮ ಕರ್ಮ ವಿಭಾಗದ ಶ್ರೀ ಸಂಯೋಜಕ ಕೂಟೇಲು ರಾಮಕೃಷ್ಣ ಭಟ್ ನಿರೂಪಿಸಿದರು.

ಸೋಮ ಸಪರ್ಯ ಶಿವನ ವಿಶೇಷ ಪೂಜೆ
ಸೋಮ ಸಪರ್ಯ ಎನ್ನುವುದು ಶಿವನ ವಿಶೇಷ ಆರಾಧನೆಯಾಗಿದ್ದು, ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಕರಕಮಲಗಳಿಂದ ಶ್ರೀ ಚಂದ್ರಮೌಳೀಶ್ವರನಿಗೆ ಸುವರ್ಣ, ಬೆಳ್ಳಿ, ಸುಗಂಧದ್ರವ್ಯ, ಗಂಗಾಜಲ, ನವಧಾನ್ಯ ಸೇರಿದಂತೆ 48 ಬಗೆಯ ವಿಶೇಷ ದ್ರವ್ಯಗಳಿಂದ ಈ ವಿಶೇಷ ಸಂದರ್ಭದಲ್ಲಿ ಅಭಿಷೇಕ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

13 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

20 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

20 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 days ago