Advertisement
Uncategorized

ತಾಳ್ಮೆಗೆ ತಪಸ್ಸಿನ ಫಲವಿದೆ | ಮನಸ್ಸಿಗೆ ಸಮಾಧಾನ, ವ್ಯವದಾನ ಇಲ್ಲದೇ ಯಾವ ಸಾಧನೆಯೂ ಇಲ್ಲ | ರಾಘವೇಶ್ವರ ಶ್ರೀ |

Share

ತಾಳ್ಮೆಗೆ ತಪಸ್ಸಿನ ಫಲ ಇದೆ. ತಾಳ್ಮೆ ಕಳೆದುಕೊಂಡರೆ ಅದರಿಂದ ಅನಾಹುತವಾಗುತ್ತದೆ. ಆತುರ, ಆತಂಕ, ಉದ್ವೇಗ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Advertisement
Advertisement
Advertisement
Advertisement
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದುಡುಕಿ, ಅವಸರದಲ್ಲಿ ಕಾರ್ಯಗಳನ್ನು ಮಾಡಿದಾಗ ವಿಚಾರಕ್ಕೆ ಅವಕಾಶವಾಗದೇ ಅನಾಹುಗಳು ಸಂಭವಿಸುತ್ತವೆ. ಸಮರ್ಪಕತೆ ಹಾಗೂ ವೇಗ ಬರುವುದು ನಿಧಾನದ ಅಭ್ಯಾಸದಿಂದ. ತಾಳ್ಮೆಯ ಮಹತ್ವ ಇದು ಎಂದು ಬಣ್ಣಿಸಿದರು. ನಿರುದ್ವೇಗ, ನಿರಾತಂಕದಿಂದ ಕಾರ್ಯವನ್ನು ಮಾಡಿದಾಗ ಅದು ಉತ್ತಮ ಫಲ ನೀಡುತ್ತದೆ. ವೇಗ ಬರುವುದೂ ತಾಳ್ಮೆಯ ಮೂಲಕ. ತಾಳ್ಮೆಯ ಮೂಲಕ ಬಂದ ವೇಗ ಸಮರ್ಪಕತೆಗೆ ಕಾರಣವಾಗುತ್ತದೆ ಎಂದರು.
Advertisement
ಕಲಿಕೆಗೆ ತಾಳ್ಮೆ ಮುಖ್ಯ. ಯಾವುದನ್ನೇ ಕಲಿಯುವ ಮುನ್ನ ತಾಳ್ಮೆ ಕಲಿಯಬೇಕು. ತಾಳ್ಮೆಯ ಬದಲು ಅವಸರ ನಮ್ಮಲ್ಲಿ ಅನಗತ್ಯ ಆತಂಕವನ್ನು ಉಂಟು ಮಾಡುತ್ತದೆ. ಇದರ ಪರಿಣಾಮ ಒತ್ತಡ. ಒತ್ತಡದ ಪರಿಣಾಮ ಗ್ರಹಿಕೆಯ ಶಕ್ತಿಯನ್ನು ಬುದ್ಧಿ ಕಳೆದುಕೊಳ್ಳುತ್ತದೆ ಎಂದು ಉದಾಹರಣೆ ಸಹಿತ ವಿವರಿಸಿದರು. ಮನಸ್ಸಿಗೆ ಸಮಾಧಾನ, ವ್ಯವದಾನ ಇಲ್ಲದೇ ಯಾವ ಸಾಧನೆಯೂ ಇಲ್ಲ. ಸಮಾಧಾನ ಕಡಿಮೆಯಾಗಿ ಅವಸರ ಹೆಚ್ಚಿದಾಗ ಅನಾಹುತಗಳು ಹೆಚ್ಚುತ್ತವೆ. ಎಲ್ಲವೂ ಬೇಕಾಗುವ ಸಮಯದಲ್ಲಿ ಆಗಬೇಕು ಎಂಬ ಧಾವಂತದಲ್ಲಿ ಇಂದು ನಾವಿದ್ದೇವೆ. ಧಾವಂತದ ಬದುಕಿನಿಂದ ಅಕಾಲಿಕ ಮುಪ್ಪಿನಂಥ ಅಡ್ಡ ಪರಿಣಾಮಗಳೂ ಎದುರಾಗುತ್ತವೆ ಎಂದರು.
ಧಾವಂತದ ಬದುಕಿನ ದುಷ್ಪರಿಣಾಮವನ್ನು ಅರಿಯದೇ ನಾವು ಆ ಬದುಕಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆಯಾ ಕಾರ್ಯಕ್ಕೆ ಅಗತ್ಯ ಸಮಯವನ್ನು ವಿನಿಯೋಗಿಸಿದಾಗ ಮಾತ್ರ ಸೂಕ್ತ ಫಲ ದೊರಕುತ್ತದೆ. ಸಮಾಧಾನವನ್ನು, ಅವಸರವಿಲ್ಲದ ಬದುಕನ್ನು ನಾವು ರೂಢಿಸಿಕೊಳ್ಳವೇಕು ಎಂದು ಸೂಚಿಸಿದರು.ಇಂದಿನ ಜೀವನದಲ್ಲಿ ವೇಗ ಕಡಿಮೆಯಾಗುವ ಸಾಧ್ಯತೆ ಕಡಿಮೆ. ನಮ್ಮ ದೈನಂದಿನ ಕಾರ್ಯಗಳಲ್ಲಿ ತಾಳ್ಮೆ ವಹಿಸಿದಾಗ, ಎಲ್ಲ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತದೆ. ತಾಳ್ಮೆಯೊಂದು ಬದುಕಿನಲ್ಲಿ ದೊರಕಿದರೆ ಉಳಿದೆಲ್ಲವೂ ಸಿಗುತ್ತದೆ ಎಂದು ವಿಶ್ಲೇಷಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

11 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

12 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

12 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

12 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

12 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

12 hours ago