Advertisement
Uncategorized

ತಾಳ್ಮೆಗೆ ತಪಸ್ಸಿನ ಫಲವಿದೆ | ಮನಸ್ಸಿಗೆ ಸಮಾಧಾನ, ವ್ಯವದಾನ ಇಲ್ಲದೇ ಯಾವ ಸಾಧನೆಯೂ ಇಲ್ಲ | ರಾಘವೇಶ್ವರ ಶ್ರೀ |

Share

ತಾಳ್ಮೆಗೆ ತಪಸ್ಸಿನ ಫಲ ಇದೆ. ತಾಳ್ಮೆ ಕಳೆದುಕೊಂಡರೆ ಅದರಿಂದ ಅನಾಹುತವಾಗುತ್ತದೆ. ಆತುರ, ಆತಂಕ, ಉದ್ವೇಗ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದುಡುಕಿ, ಅವಸರದಲ್ಲಿ ಕಾರ್ಯಗಳನ್ನು ಮಾಡಿದಾಗ ವಿಚಾರಕ್ಕೆ ಅವಕಾಶವಾಗದೇ ಅನಾಹುಗಳು ಸಂಭವಿಸುತ್ತವೆ. ಸಮರ್ಪಕತೆ ಹಾಗೂ ವೇಗ ಬರುವುದು ನಿಧಾನದ ಅಭ್ಯಾಸದಿಂದ. ತಾಳ್ಮೆಯ ಮಹತ್ವ ಇದು ಎಂದು ಬಣ್ಣಿಸಿದರು. ನಿರುದ್ವೇಗ, ನಿರಾತಂಕದಿಂದ ಕಾರ್ಯವನ್ನು ಮಾಡಿದಾಗ ಅದು ಉತ್ತಮ ಫಲ ನೀಡುತ್ತದೆ. ವೇಗ ಬರುವುದೂ ತಾಳ್ಮೆಯ ಮೂಲಕ. ತಾಳ್ಮೆಯ ಮೂಲಕ ಬಂದ ವೇಗ ಸಮರ್ಪಕತೆಗೆ ಕಾರಣವಾಗುತ್ತದೆ ಎಂದರು.
ಕಲಿಕೆಗೆ ತಾಳ್ಮೆ ಮುಖ್ಯ. ಯಾವುದನ್ನೇ ಕಲಿಯುವ ಮುನ್ನ ತಾಳ್ಮೆ ಕಲಿಯಬೇಕು. ತಾಳ್ಮೆಯ ಬದಲು ಅವಸರ ನಮ್ಮಲ್ಲಿ ಅನಗತ್ಯ ಆತಂಕವನ್ನು ಉಂಟು ಮಾಡುತ್ತದೆ. ಇದರ ಪರಿಣಾಮ ಒತ್ತಡ. ಒತ್ತಡದ ಪರಿಣಾಮ ಗ್ರಹಿಕೆಯ ಶಕ್ತಿಯನ್ನು ಬುದ್ಧಿ ಕಳೆದುಕೊಳ್ಳುತ್ತದೆ ಎಂದು ಉದಾಹರಣೆ ಸಹಿತ ವಿವರಿಸಿದರು. ಮನಸ್ಸಿಗೆ ಸಮಾಧಾನ, ವ್ಯವದಾನ ಇಲ್ಲದೇ ಯಾವ ಸಾಧನೆಯೂ ಇಲ್ಲ. ಸಮಾಧಾನ ಕಡಿಮೆಯಾಗಿ ಅವಸರ ಹೆಚ್ಚಿದಾಗ ಅನಾಹುತಗಳು ಹೆಚ್ಚುತ್ತವೆ. ಎಲ್ಲವೂ ಬೇಕಾಗುವ ಸಮಯದಲ್ಲಿ ಆಗಬೇಕು ಎಂಬ ಧಾವಂತದಲ್ಲಿ ಇಂದು ನಾವಿದ್ದೇವೆ. ಧಾವಂತದ ಬದುಕಿನಿಂದ ಅಕಾಲಿಕ ಮುಪ್ಪಿನಂಥ ಅಡ್ಡ ಪರಿಣಾಮಗಳೂ ಎದುರಾಗುತ್ತವೆ ಎಂದರು.
ಧಾವಂತದ ಬದುಕಿನ ದುಷ್ಪರಿಣಾಮವನ್ನು ಅರಿಯದೇ ನಾವು ಆ ಬದುಕಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆಯಾ ಕಾರ್ಯಕ್ಕೆ ಅಗತ್ಯ ಸಮಯವನ್ನು ವಿನಿಯೋಗಿಸಿದಾಗ ಮಾತ್ರ ಸೂಕ್ತ ಫಲ ದೊರಕುತ್ತದೆ. ಸಮಾಧಾನವನ್ನು, ಅವಸರವಿಲ್ಲದ ಬದುಕನ್ನು ನಾವು ರೂಢಿಸಿಕೊಳ್ಳವೇಕು ಎಂದು ಸೂಚಿಸಿದರು.ಇಂದಿನ ಜೀವನದಲ್ಲಿ ವೇಗ ಕಡಿಮೆಯಾಗುವ ಸಾಧ್ಯತೆ ಕಡಿಮೆ. ನಮ್ಮ ದೈನಂದಿನ ಕಾರ್ಯಗಳಲ್ಲಿ ತಾಳ್ಮೆ ವಹಿಸಿದಾಗ, ಎಲ್ಲ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತದೆ. ತಾಳ್ಮೆಯೊಂದು ಬದುಕಿನಲ್ಲಿ ದೊರಕಿದರೆ ಉಳಿದೆಲ್ಲವೂ ಸಿಗುತ್ತದೆ ಎಂದು ವಿಶ್ಲೇಷಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago