Advertisement
Uncategorized

ತಾಳ್ಮೆಗೆ ತಪಸ್ಸಿನ ಫಲವಿದೆ | ಮನಸ್ಸಿಗೆ ಸಮಾಧಾನ, ವ್ಯವದಾನ ಇಲ್ಲದೇ ಯಾವ ಸಾಧನೆಯೂ ಇಲ್ಲ | ರಾಘವೇಶ್ವರ ಶ್ರೀ |

Share

ತಾಳ್ಮೆಗೆ ತಪಸ್ಸಿನ ಫಲ ಇದೆ. ತಾಳ್ಮೆ ಕಳೆದುಕೊಂಡರೆ ಅದರಿಂದ ಅನಾಹುತವಾಗುತ್ತದೆ. ಆತುರ, ಆತಂಕ, ಉದ್ವೇಗ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದುಡುಕಿ, ಅವಸರದಲ್ಲಿ ಕಾರ್ಯಗಳನ್ನು ಮಾಡಿದಾಗ ವಿಚಾರಕ್ಕೆ ಅವಕಾಶವಾಗದೇ ಅನಾಹುಗಳು ಸಂಭವಿಸುತ್ತವೆ. ಸಮರ್ಪಕತೆ ಹಾಗೂ ವೇಗ ಬರುವುದು ನಿಧಾನದ ಅಭ್ಯಾಸದಿಂದ. ತಾಳ್ಮೆಯ ಮಹತ್ವ ಇದು ಎಂದು ಬಣ್ಣಿಸಿದರು. ನಿರುದ್ವೇಗ, ನಿರಾತಂಕದಿಂದ ಕಾರ್ಯವನ್ನು ಮಾಡಿದಾಗ ಅದು ಉತ್ತಮ ಫಲ ನೀಡುತ್ತದೆ. ವೇಗ ಬರುವುದೂ ತಾಳ್ಮೆಯ ಮೂಲಕ. ತಾಳ್ಮೆಯ ಮೂಲಕ ಬಂದ ವೇಗ ಸಮರ್ಪಕತೆಗೆ ಕಾರಣವಾಗುತ್ತದೆ ಎಂದರು.
ಕಲಿಕೆಗೆ ತಾಳ್ಮೆ ಮುಖ್ಯ. ಯಾವುದನ್ನೇ ಕಲಿಯುವ ಮುನ್ನ ತಾಳ್ಮೆ ಕಲಿಯಬೇಕು. ತಾಳ್ಮೆಯ ಬದಲು ಅವಸರ ನಮ್ಮಲ್ಲಿ ಅನಗತ್ಯ ಆತಂಕವನ್ನು ಉಂಟು ಮಾಡುತ್ತದೆ. ಇದರ ಪರಿಣಾಮ ಒತ್ತಡ. ಒತ್ತಡದ ಪರಿಣಾಮ ಗ್ರಹಿಕೆಯ ಶಕ್ತಿಯನ್ನು ಬುದ್ಧಿ ಕಳೆದುಕೊಳ್ಳುತ್ತದೆ ಎಂದು ಉದಾಹರಣೆ ಸಹಿತ ವಿವರಿಸಿದರು. ಮನಸ್ಸಿಗೆ ಸಮಾಧಾನ, ವ್ಯವದಾನ ಇಲ್ಲದೇ ಯಾವ ಸಾಧನೆಯೂ ಇಲ್ಲ. ಸಮಾಧಾನ ಕಡಿಮೆಯಾಗಿ ಅವಸರ ಹೆಚ್ಚಿದಾಗ ಅನಾಹುತಗಳು ಹೆಚ್ಚುತ್ತವೆ. ಎಲ್ಲವೂ ಬೇಕಾಗುವ ಸಮಯದಲ್ಲಿ ಆಗಬೇಕು ಎಂಬ ಧಾವಂತದಲ್ಲಿ ಇಂದು ನಾವಿದ್ದೇವೆ. ಧಾವಂತದ ಬದುಕಿನಿಂದ ಅಕಾಲಿಕ ಮುಪ್ಪಿನಂಥ ಅಡ್ಡ ಪರಿಣಾಮಗಳೂ ಎದುರಾಗುತ್ತವೆ ಎಂದರು.
ಧಾವಂತದ ಬದುಕಿನ ದುಷ್ಪರಿಣಾಮವನ್ನು ಅರಿಯದೇ ನಾವು ಆ ಬದುಕಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆಯಾ ಕಾರ್ಯಕ್ಕೆ ಅಗತ್ಯ ಸಮಯವನ್ನು ವಿನಿಯೋಗಿಸಿದಾಗ ಮಾತ್ರ ಸೂಕ್ತ ಫಲ ದೊರಕುತ್ತದೆ. ಸಮಾಧಾನವನ್ನು, ಅವಸರವಿಲ್ಲದ ಬದುಕನ್ನು ನಾವು ರೂಢಿಸಿಕೊಳ್ಳವೇಕು ಎಂದು ಸೂಚಿಸಿದರು.ಇಂದಿನ ಜೀವನದಲ್ಲಿ ವೇಗ ಕಡಿಮೆಯಾಗುವ ಸಾಧ್ಯತೆ ಕಡಿಮೆ. ನಮ್ಮ ದೈನಂದಿನ ಕಾರ್ಯಗಳಲ್ಲಿ ತಾಳ್ಮೆ ವಹಿಸಿದಾಗ, ಎಲ್ಲ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತದೆ. ತಾಳ್ಮೆಯೊಂದು ಬದುಕಿನಲ್ಲಿ ದೊರಕಿದರೆ ಉಳಿದೆಲ್ಲವೂ ಸಿಗುತ್ತದೆ ಎಂದು ವಿಶ್ಲೇಷಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

6 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

6 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

13 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

14 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago