Advertisement
ಧಾರ್ಮಿಕ

ಕ್ರೋಧವೆಂಬ ಬೆಂಕಿ ಎಲ್ಲವನ್ನೂ ಸುಡುತ್ತದೆ | ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ – ರಾಘವೇಶ್ವರ ಶ್ರೀ |

Share

ಸಿಟ್ಟು ಎಂಬ ಬೆಂಕಿ ಮೊದಲು ನಮ್ಮನ್ನು ಸುಡುತ್ತದೆ; ಆ ಬಳಿಕ ಇತರರನ್ನು ಸುಡುತ್ತದೆ. ಕ್ರೋಧವೆಂಬ ಬೆಂಕಿ ನಮ್ಮ ಮನಸ್ಸು, ಬದುಕು, ಸಂಬಂಧ ಹೀಗೆ ಎಲ್ಲವನ್ನೂ ಸುಡುತ್ತದೆ. ಆದ್ದರಿಂದ ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ. ಸಿಟ್ಟನ್ನು ಗೆಲ್ಲುವ ಶಕ್ತಿಯನ್ನು ಶ್ರೀರಾಮ ನಮಗೆಲ್ಲ ಕರುಣಿಸಲಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಸಿಟ್ಟಿನ ಪರಿಣಾಮ ಎಂದೂ ಒಳ್ಳೆಯದಾಗುವುದಿಲ್ಲ. ಸಿಟ್ಟು ಬಂದಾಗ ಆದ ಕೆಟ್ಟ ಕೆಲಸದ ಕಲೆ ಎಂದಿಗೂ ಮಾಸುವುದಿಲ್ಲ. ಸಿಟ್ಟು ಎಷ್ಟೋ ಬಾರಿ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಉದಾಹರಣೆ ಸಹಿತ ವಿವರಿಸಿದರು.

ಸಿಟ್ಟು ಬಂದಾಗ ಸರಿ ತಪ್ಪು ಯಾವುದು ಎಂದು ಗೊತ್ತಾಗುವುದಿಲ್ಲ. ಬುದ್ಧಿ ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ನೀವು ಸಿಟ್ಟನ್ನು ಗುರುತಿಸುವಂತಾದರೆ ಅದು ತಾನಾಗಿಯೇ ನಮ್ಮಿಂದ ದೂರವಾಗುತ್ತದೆ ಎಂದರು. ಮನುಷ್ಯನಿಗೆ ಹಾಗೂ ಜೀವಲೋಕದ ಎಲ್ಲರಿಗೆ ಅತ್ಯಂತ ಕಠಿಣ ಎನಿಸಿದ, ಗೆಲ್ಲಲು ಅತ್ಯಂತ ಕಷ್ಟಸಾಧ್ಯ ಎನಿಸುವ ಶತ್ರು ಯಾರು ಎಂದು ಯಕ್ಷ ಒಮ್ಮೆ ಧರ್ಮರಾಜನನ್ನು ಕೇಳುತ್ತಾನೆ. ಮಹಾಭಾರತದ ದುಷ್ಟ ಚತುಷ್ಟಯರು ಎನಿಸಿದ ಧುರ್ಯೋಧನ, ಕರ್ಣ, ದುಶ್ಯಾಸನ ಮತ್ತು ಶಕುನಿ ಎಂದು ನಾವು ಇಂಥ ಪ್ರಶ್ನೆಗೆ ಉತ್ತರ ನೀಡುತ್ತಿದ್ದೆವು. ಆದರೆ ಕ್ರೋಧ ಎಂದು ಧರ್ಮರಾಜ ಉತ್ತರಿಸುತ್ತಾನೆ. ಇದು ಮಹಾತ್ಮರ ಯೋಚನಾ ಲಹರಿ ಎಂದು ಅಭಿಪ್ರಾಯಪಟ್ಟರು.

ಕ್ರೋಧಕ್ಕೆ ತುತ್ತಾಗದೇ ಇರುವವರು ಯಾರೂ ಇಲ್ಲ. ಇದು ಎಲ್ಲರ ನಿಜವಾದ ಶತ್ರು. ಕ್ರೋಧ ಎಂದರೆ ನಮ್ಮ ಬುದ್ಧಿ ನಮ್ಮ ವಿವೇಕವನ್ನು ತಪ್ಪಿಸುವಂಥದ್ದು. ಸಿಟ್ಟು ಬಂದಾಗ ಎಂಥ ಬುದ್ಧಿವಂತ ಕೂಡಾ ವಿವೇಕ ಕಳೆದುಕೊಳ್ಳುತ್ತಾನೆ. ಸಿಟ್ಟು ಜೀವನಕ್ಕೇ ಮುಳುವಾದ ನಿದರ್ಶನಗಳೂ ಸಾಕಷ್ಟಿವೆ ಎಂದು ಹೇಳಿದರು. ಸಿಟ್ಟಿನಿಂದ ಆಡಿದ ಮಾತು, ಮಾಡಿದ ಕಾರ್ಯದಿಂದ ಆಗುವ ಅನಾಹುತವನ್ನು ತಪ್ಪಿಸಲು ಸಾಧ್ಯವಿಲ್ಲ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಮನಸ್ಸನ್ನು ಗೆಲ್ಲುವುದು ಯುದ್ಧ ಅಥವಾ ರಾಜ್ಯವನ್ನು ಗೆದ್ದದ್ದಕ್ಕಿಂತ ಮೇಲು. ರಾವಣ ಇಂದ್ರಿಯಗಳನ್ನು ಗೆದ್ದು ವರಗಳನ್ನು ಪಡೆದ. ಆದರೆ ಬಳಿಕ ಇಂದ್ರಿಯಗಳು ರಾವಣನನ್ನು ಗೆದ್ದವು. ರಾವಣ ಕ್ರೋಧದಿಂದ ಅವಿವೇಕಿಯಾಗಿ ಮಾಡಬಾರದ ಪಾಪ ಕಾರ್ಯಗಳನ್ನು ಮಾಡಿದ. ಅದರ ಫಲ ಆತನ ನಾಶ ಎಂದು ಬಣ್ಣಿಸಿದರು.

ಯುಪಿಎಸ್ಸಿ ಪರೀಕ್ಷೆಯಲ್ಲಿ 62 ರ್ಯಾಂಕ್ ಗಳಿಸಿ ಐಎಫ್‍ಎಸ್‍ಗೆ ಆಯ್ಕೆಯಾದ ಕುಮಟಾ ಮಂಡಲ ಅಚವೆಯ ಲಲಿತಾ- ಸೀತಾರಾಮ ಹೆಗಡೆಯವರ ಪುತ್ರ ಎಸ್.ನವೀನ್‍ಕುಮಾರ್ ಅಚವೆ ಅವರನ್ನು ಶ್ರೀಗಳು ಸನ್ಮಾನಿಸಿದರು. ಚಾತುರ್ಮಾಸ್ಯ ಅಂಗವಾಗಿ ಸೋಮವಾರ ಎಂ.ಎಂ.ಗಣೇಶ್ ಮತ್ತು ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ರುದ್ರಹವನ, ರಾಮತಾರಕ ಹವನ, ಚಂಡೀಪಾರಾಯಣ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

13 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

15 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

21 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago