ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.
ಮಾಣಿ ಮಠದ ಸಪರಿವಾರ ಶ್ರೀರಾಮಚಂದ್ರದೇವರ ಶಿಲಾಮಯ ಗರ್ಭಗುಡಿ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಶಿಷ್ಯರ ಮಾರ್ಗದರ್ಶನ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ನಮ್ಮತನ ಉಳಿಸೋಣ. ನಮ್ಮ ಆಚರಣೆ ಸಂಪ್ರದಾಯ, ಸಂಸ್ಕೃತಿ, ಭಾಷೆ, ನಾಡು ನುಡಿ ಉಳಿಸಲು ನಮ್ಮಿಂದಾದ ಕೊಡುಗೆ ನೀಡೋಣ. ನಶ್ವರವನ್ನು ಬಿಟ್ಟು ಶಾಶ್ವತವಾದ ಈಶ್ವರನ ಕಡೆಗೆ ತೆರಳುವ ಸಂಕಲ್ಪ ಮಾಡೋಣ. ಭಗವತ್ ಚೈತನ್ಯ ಶಾಶ್ವತ; ಅದರ ಉಪಾಸನೆಯೇ ಆಧ್ಯಾತ್ಮ. ಲೌಕಿಕವಾಗಿ ನೋಡಿದರೂ ಶಕ್ತಿ, ಅನುಕೂಲ ಇದ್ದಾಗ ಸತ್ಕಾರ್ಯಗಳನ್ನು ಮಾಡಬೇಕು. ರಾಮದೇವರ ಗರ್ಭಗೃಹ ಇಡೀ ನಮ್ಮ ಮಠ ವ್ಯವಸ್ಥೆಯ ಶಿಖರ ಇದ್ದಂತೆ. ರಾಮ ಸರ್ವೋಚ್ಛ ಪೀಠದಲ್ಲಿರುವಂತೆ ಮಾಡುವ ಪ್ರಯತ್ನವೇ ಶಿಲಾಮಯ ಗರ್ಭಗುಡಿ ಎಂದು ಬಣ್ಣಿಸಿದರು. ಜೀವನ ಮುಂದುವರಿಯುತ್ತಿರಬೇಕು. ಹರಿಯುವ ನದಿಯಾಗಬೇಕು. ಆಗ ಮಾತ್ರ ಅದು ಶುದ್ಧಿಯಾಗಿರುತ್ತದೆ. ಸಂಸ್ಥೆಯೂ ಹಾಗೆಯೇ; ಉನ್ನತಿಯತ್ತ, ಶ್ರೇಷ್ಠತೆಯತ್ತ ಮುನ್ನಡೆಯಬೇಕು. ಮಾಣಿ ಮಠದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಪರ್ವ ಇದಕ್ಕೆ ಅನುಕರಣೀಯ ನಿದರ್ಶನ ಎಂದು ಹೇಳಿದರು.ಬದಿಯಡ್ಕದ ದಂತವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಢ ಸಾವಿನ ಬಗ್ಗೆ ಉಲ್ಲೇಖಿಸಿದ ಸ್ವಾಮೀಜಿಯವರು, ಭಾರತದಲ್ಲಿ ನಾವೇ ಪರಕೀಯರಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ನೆರೆಯ ಕಾಸರಗೋಡಿಗೆ ಬಂದ ಪರಿಸ್ಥಿತಿ ನಾಳೆ ದಕ್ಷಿಣ ಕನ್ನಡಕ್ಕೂ ಬರಬಹುದು; ಇಂಥ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಲು ಇಡೀ ಸಮುದಾಯ ಸಂಘಟಿತವಾಗಬೇಕು. ಇಡೀ ಸಮಾಜ ಎಚ್ಚರಗೊಂಡು ಇಂಥ ಘಟನೆ ಮರುಕಳಿಸದಂತೆ ತಕ್ಕ ಉತ್ತರ ನೀಡಬೇಕು ಎಂದು ರಾಘವೇಶ್ವರ ಶ್ರೀಗಳು ಆಶಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…