Advertisement
ಸುದ್ದಿಗಳು

ರಾಮನ ಹಾದಿಯಲ್ಲಿ ಮುನ್ನಡೆಯೋಣ‌ | ರಾಘವೇಶ್ವರ ಶ್ರೀ ಕರೆ

Share

ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.

ಮಾಣಿ ಮಠದ ಸಪರಿವಾರ ಶ್ರೀರಾಮಚಂದ್ರದೇವರ ಶಿಲಾಮಯ ಗರ್ಭಗುಡಿ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಶಿಷ್ಯರ ಮಾರ್ಗದರ್ಶನ ಸಭೆಯಲ್ಲಿ ಅವರು  ಆಶೀರ್ವಚನ ನೀಡಿದರು. ನಮ್ಮತನ ಉಳಿಸೋಣ. ನಮ್ಮ ಆಚರಣೆ ಸಂಪ್ರದಾಯ, ಸಂಸ್ಕೃತಿ, ಭಾಷೆ, ನಾಡು ನುಡಿ ಉಳಿಸಲು ನಮ್ಮಿಂದಾದ ಕೊಡುಗೆ ನೀಡೋಣ. ನಶ್ವರವನ್ನು ಬಿಟ್ಟು ಶಾಶ್ವತವಾದ ಈಶ್ವರನ ಕಡೆಗೆ ತೆರಳುವ ಸಂಕಲ್ಪ ಮಾಡೋಣ. ಭಗವತ್ ಚೈತನ್ಯ ಶಾಶ್ವತ; ಅದರ ಉಪಾಸನೆಯೇ ಆಧ್ಯಾತ್ಮ. ಲೌಕಿಕವಾಗಿ ನೋಡಿದರೂ ಶಕ್ತಿ, ಅನುಕೂಲ ಇದ್ದಾಗ ಸತ್ಕಾರ್ಯಗಳನ್ನು ಮಾಡಬೇಕು. ರಾಮದೇವರ ಗರ್ಭಗೃಹ ಇಡೀ ನಮ್ಮ ಮಠ ವ್ಯವಸ್ಥೆಯ ಶಿಖರ ಇದ್ದಂತೆ. ರಾಮ ಸರ್ವೋಚ್ಛ ಪೀಠದಲ್ಲಿರುವಂತೆ ಮಾಡುವ ಪ್ರಯತ್ನವೇ ಶಿಲಾಮಯ ಗರ್ಭಗುಡಿ ಎಂದು ಬಣ್ಣಿಸಿದರು.
ಜೀವನ ಮುಂದುವರಿಯುತ್ತಿರಬೇಕು. ಹರಿಯುವ ನದಿಯಾಗಬೇಕು. ಆಗ ಮಾತ್ರ ಅದು ಶುದ್ಧಿಯಾಗಿರುತ್ತದೆ. ಸಂಸ್ಥೆಯೂ ಹಾಗೆಯೇ; ಉನ್ನತಿಯತ್ತ, ಶ್ರೇಷ್ಠತೆಯತ್ತ ಮುನ್ನಡೆಯಬೇಕು. ಮಾಣಿ ಮಠದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಪರ್ವ ಇದಕ್ಕೆ ಅನುಕರಣೀಯ ನಿದರ್ಶನ ಎಂದು ಹೇಳಿದರು.
ಕಾಸರಗೋಡಿಗೆ ಬಂದ ಸ್ಥಿತಿ ನಾಳೆ ಇಲ್ಲಿಗೆ.....

ಬದಿಯಡ್ಕದ ದಂತವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಢ ಸಾವಿನ ಬಗ್ಗೆ ಉಲ್ಲೇಖಿಸಿದ ಸ್ವಾಮೀಜಿಯವರು, ಭಾರತದಲ್ಲಿ ನಾವೇ ಪರಕೀಯರಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ನೆರೆಯ ಕಾಸರಗೋಡಿಗೆ ಬಂದ ಪರಿಸ್ಥಿತಿ ನಾಳೆ ದಕ್ಷಿಣ ಕನ್ನಡಕ್ಕೂ ಬರಬಹುದು; ಇಂಥ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಲು ಇಡೀ ಸಮುದಾಯ ಸಂಘಟಿತವಾಗಬೇಕು. ಇಡೀ ಸಮಾಜ ಎಚ್ಚರಗೊಂಡು ಇಂಥ ಘಟನೆ ಮರುಕಳಿಸದಂತೆ ತಕ್ಕ ಉತ್ತರ ನೀಡಬೇಕು ಎಂದು ರಾಘವೇಶ್ವರ ಶ್ರೀಗಳು ಆಶಿಸಿದರು.

ಸೇವಾ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಗಾರಡ್ಕ ಜನಾರ್ದನ ಭಟ್ ಆರ್ಥಿಕ ಅವಲೋಕನ ನೆರವೇರಿಸಿದರು. ಅಗಲಿದ ಶಿಷ್ಯಬಂಧುಗಳಿಗೆ ಡಾ.ವೈ.ವಿ.ಕೃಷ್ಣಮೂರ್ತಿ ಶ್ರದ್ಧಾಂಜಲಿ ಸಮರ್ಪಿಸಿದರು.
ಹವ್ಯಕ ಮಹಾಮಂಡಲದ ಕಾರ್ಯದರ್ಶಿ ಪಿದಮಲೆ ನಾಗರಾಜ ಭಟ್, ಮಂಡಲ ಗುರಿಕಾರರಾದ ಉದಯಕುಮಾರ್ ಭಟ್ ಖಂಡಿಗೆ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಮತ್ತಿತರರು ಉಪಸ್ಥಿತರಿದ್ದರು. ಉದಯಶಂಕರ ಅರಸಿನಮಕ್ಕಿ ನಿರೂಪಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

23 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago