Advertisement
ಸುದ್ದಿಗಳು

ಪ್ರಕೃತಿ ಉಪಾಸನೆಯೇ ರಾಜರಾಜೇಶ್ವರಿಯ ಆರಾಧನೆ: ರಾಘವೇಶ್ವರ ಶ್ರೀ

Share

ಇಡೀ ನಮ್ಮ ಬದುಕು ಪ್ರಕೃತಿಯ ದಯೆ. ಪಂಚಭೂತಗಳೆಲ್ಲವೂ ಪ್ರಕೃತಿ. ನಿಂತ ನೆಲ, ಕುಡಿಯುವ ಜಲ, ಅಗ್ನಿ, ವಾಯು, ಆಕಾಶ ಎಲ್ಲವೂ ಆಕೆಯ ಕರುಣೆ. ಈ ಪ್ರಕೃತಿಯನ್ನು ಆರಾಧಿಸುವುದೇ ನವರಾತ್ರಿ ಉಪಾಸನೆಯ ವಿಶೇಷ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ ಮಾಲಿಕೆಯ ಎರಡನೇ ದಿನದ ಪ್ರವಚನವನ್ನು ಶ್ರೀಗಳು ಅನುಗ್ರಹಿಸಿದರು.

ರಾಜರಾಜೇಶ್ವರಿ ತ್ರಿಪುರಸುಂದರಿಯ ಮೊದಲ ರೂಪ ಪ್ರಕೃತಿ. ಬ್ರಹ್ಮ ಧ್ಯಾನ ಮಾಡಿದಾಗ ಪರಾಶಕ್ತಿ ಬೆಟ್ಟವಾಗಿ ಬ್ರಹ್ಮನಿಂದ ಒಡಮೂಡಿತು. ಸಕಲ ಜೀವರಾಶಿಗಳ ಮಾತೆಯಾದ ಶಕ್ತಿಸ್ವರೂಪಿಣಿ ವಿಶ್ವದ ಸೃಷ್ಟಿಕರ್ತೆಯಾಗಿ, ಪ್ರಕೃತಿಯಾಗಿ ಆವೀರ್ಭವಿಸಿದಳು. ಪಂಚೇಂದ್ರಿಯಗಳು ಕೂಡಾ ಪ್ರಕೃತಿಯೇ. ನಮ್ಮ ಅನುಭವಕ್ಕೆ ಬರುವುದೆಲ್ಲವೂ ಪ್ರಕೃತಿ. ದೇವಿಯ ಮಡಿಲಲ್ಲೇ ನಾವೆಲ್ಲ ಇದ್ದೇವೆ ಎಂದು ವಿಶ್ಲೇಷಿಸಿದರು.

ತ್ರಿಪುರಸುಂದರಿ ಕರುಣಿಸಿದ ವಿಶೇಷ ವರಸ್ವರೂಪವಾದ ಪುಷ್ಪಮಾಲಿಕೆಯನ್ನು ಉಪೇಕ್ಷಿಸಿದ ಇಂದ್ರನಿಗೆ ದೂರ್ವಾಸರು ಶಾಪದ ಪರಿಣಾಮವಾಗಿ ಇಂದ್ರ ತೇಜೋಹೀನನಾಗುತ್ತಾನೆ. ಪುಣ್ಯ ಗರ್ವವಾಗಿ ಮಾರ್ಪಟ್ಟಾಗ ಅದು ಕೂಡಾ ಪಾಪವಾಗಿ ಪರಿಣಾಮವಾಗುತ್ತದೆ ಎನ್ನುವುದಕ್ಕೆ ಇದು ನಿದರ್ಶನ ಎಂದರು.

ಮಹಾವಿಷ್ಣು ಸಮುದ್ರ ಮಥನದ ಬಳಿಕ ದೇವತೆಗಳಿಗೆ ಅಮೃತವನ್ನು ಕರುಣಿಸಲು ರಾಜರಾಜೇಶ್ವರಿಯನ್ನು ನೆನೆದು ಕೊನೆಗೆ ಆಕೆಯಲ್ಲೇ ಲೀನನಾಗಿ ಮೋಹಿನಿಯ ರೂಪವನ್ನು ತಾಳಿ ರಾಕ್ಷಸರ ಸಂಹಾರಕ್ಕೆ ಕಾರಣನಾಗುತ್ತಾನೆ. ರಾಜರಾಜೇಶ್ವರಿ ತ್ರಿಪುರಸುಂದರಿಯ ಹೃದಯ ಅತ್ಯಂಕ ಕೋಮಲ. ಆಕೆಯ ಧ್ಯಾನ ಮಾತ್ರದಿಂದ ಸತ್ಫಲಗಳು ಪ್ರಾಪ್ತಿಯಾಗುತ್ತವೆ. ನಾವು ಮಾಡಿದ ಪಾಪಗಳೆಲ್ಲ ಪುಣ್ಯಮಯವಾಗಿ ಪರಿವರ್ತನೆಯಾಗುವ ಮಾರ್ಗ ರಾಜರಾಜೇಶ್ವರಿಯ ಉಪಾಸನೆ ಮಾತ್ರ ಎಂದು ಹೇಳಿದರು.
ಸರಿಯಾಗಿ ಆಕೆಯ ಆರಾಧನೆ ನಡೆದರೆ, ಆಕೆಯ ಕರುಣೆ ಮಳೆಯಾಗಿ ಭಕ್ತರತ್ತ ಹರಿಯುತ್ತದೆ. ದೇವಿಯ ಉಪಾಸನೆಯಲ್ಲಿ ಶ್ರದ್ಧೆ- ಭಕ್ತಿ ಮುಖ್ಯ. ಅವುಗಳಿದ್ದರೆ, ವಿಧಿಯುಕ್ತವಾಗಿ ಮಾಡಲು ಸಾಧ್ಯವಾಗದೇ ವಿಧಿಹೀನವಾಗಿ ಮಾಡಿದರೂ ಆಕೆಗೆ ಸಲ್ಲುತ್ತದೆ. ಇಹ- ಪರದ ಸುಖವನ್ನು ಆಕೆ ಅನುಗ್ರಹಿಸುತ್ತಾಳೆ. ಪುಣ್ಯ ಸಂಪಾದನೆ ಮಾಡಿಕೊಳ್ಳುವ ಸುಲಭ ಮಾರ್ಗ ತ್ರಿಪುರಸುಂದರಿಯ ಆರಾಧನೆ ಎಂದರು.

ಒಳ್ಳೆಯ ವಿಷಯಗಳ ಮೇಲೆ ಜಿಜ್ಞಾಸೆ ಅಗತ್ಯ. ಭಗವಂತ ಮುನಿಗಳ ಜತೆ ಮುನಿಯಾಗಿ, ಒಳ್ಳೆಯವರ ಜತೆ ಒಳ್ಳೆಯವರಾಗಿ ಹೇಗೆ ಅನುಗ್ರಹಿಸುತ್ತಾನೆ ಎನ್ನುವುದಕ್ಕೆ ಲಲಿತೋಪಾಖ್ಯಾನವನ್ನು ಹಯಗ್ರೀವ ಮುನಿಯ ರೂಪ ಪಡೆದು ಅಗಸ್ತ್ಯರಿಗೆ ಅನುಗ್ರಹಿಸುತ್ತಾರೆ. ಬಗೆಬಗೆಯಲ್ಲಿ ಜೀವರಾಶಿಗಳ ಮೇಲೆ ಕರುಣೆ ತೋರುವ ಪರಿಯನ್ನು ಬಣ್ಣಿಸಿದ್ದಾಗಿ ವಿವರಿಸಿದರು.
ಚಿನ್ಮಯ ಮತ್ತು ಅನುಗ್ರಹ ಮುದ್ರೆಯನ್ನು ಹೊಂದಿದ ರಾಮ ಭೋಗ, ಮೋಕ್ಷವನ್ನು ನೀಡುವಂತೆ ರಾಜರಾಜೇಶ್ವರಿಯ ಉಪಾಸನೆ ಇದೇ ಫಲವನ್ನು ನೀಡುವಂಥದ್ದು ಎಂದು ಹಯಗ್ರೀವ ಶ್ರೀವಿದ್ಯೆ ಎಂಬ ಮಂತ್ರವನ್ನು ಅಗಸ್ತ್ಯರಿಗೆ ಅನುಗ್ರಹಿಸುತ್ತಾರೆ. ಶ್ರೀವಿದ್ಯೆಯ ಉಪಾಸನೆ ಮಾಡುವವರೆಲ್ಲರೂ ಕಷ್ಟಕೋಟಲೆಗಳಿಂದ ಮುಕ್ತರಾಗುತ್ತಾರೆ ಎನ್ನುವುದನ್ನು ಅಗಸ್ತ್ಯರಿಗೆ ವಿವರಿಸಿದ್ದಾರೆ ಎಂದರು.

ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ಮಾಣಿಮಠ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್, ಪುತ್ತೂರಿನ ಸ್ವರ್ಣೋದ್ಯಮಿ ಬಲರಾಂ ಆಚಾರ್ಯ ದಂಪತಿ, ಹವ್ಯಕ ಮಹಾಮಂಡಲ ಗೌರವ ಕಾರ್ಯದರ್ಶಿ ಪೆದಮಲೆ ನಾಗರಾಜ ಭಟ್, ಪ್ರಧಾನ ಕಾರ್ಯದರ್ಶಿ ಉದಯಶಂಕರ ಮಿತ್ತೂರು, ಯುವ ಪ್ರಧಾನ ಕೇಶವ ಪ್ರಕಾಶ್ ಮುಣ್ಚಿಕಾನ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ, ಕಾರ್ಯದರ್ಶಿ ಮಹೇಶ್ ಕುದುಪುಲ, ಮುಳ್ಳೇರಿಯಾ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ಮಂಗಳೂರು ಮಂಡಲ ಉಪಾಧ್ಯಕ್ಷ ರಾಜಶೇಖರ ಕಾಕುಂಜೆ, ಉಂಡೆಮನೆ ವಿಶ್ವೇಶ್ವರ ಭಟ್, ಶ್ರೀಶಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

16 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

21 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

21 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago