ಖಡ್ಗಕ್ಕೆ ನಡುಗದ ಪಾಪಿಯ ಹೃದಯ ಕರುಣೆಯಿಂದ ಕರಗುತ್ತದೆ. ಕರುಣೆಯಿಂದ ಕ್ರೌರ್ಯವನ್ನು ಗೆದ್ದ ನಿದರ್ಶನಗಳು ಸಾಕಷ್ಟಿವೆ. ಆದ್ದರಿಂದಲೇ ಕರುಣೆ ಶ್ರೇಷ್ಠ ಭಾವ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕರುಣೆಯ ಶಕ್ತಿ ಖಡ್ಗಕ್ಕಿಂತಲೂ ಹೆಚ್ಚು ಎಂದು ವಿಶ್ಲೇಷಿಸಿದರು. ರಾಮ, ಸೀತೆ, ಹನುಮಂತನ ಗುಣ ಬೆಳೆಸಿಕೊಳ್ಳಬೇಕೆಂದರೆ, ದೇಹದಲ್ಲಿ ರಕ್ತ ಹರಿಯುವಂತೆ ಕರುಣೆ ಎಲ್ಲೆಡೆ ತುಂಬಿ ಹರಿಯಬೇಕು. ಜಗತ್ತಿನ ಪ್ರತಿಯೊಬ್ಬರ ಬಗ್ಗೆಯೂ ಕರುಣೆ ತೋರುವ ಮನಸ್ಸು ಬೆಳೆಸಿಕೊಳ್ಳೋಣ ಎಂದು ಹೇಳಿದರು.
ತಾಟಕಿಯನ್ನು ಹತ್ಯೆ ಮಾಡುವಂತೆ ವಿಶ್ವಾಮಿತ್ರರು ಸೂಚಿಸಿದರೂ, ಹೆಣ್ಣು ಎಂಬ ಕಾರಣಕ್ಕೆ ರಾಮ ಕರುಣೆ ತೋರುತ್ತಾನೆ. ರಾಕ್ಷಸಿಯಾದರೂ, ಸ್ತ್ರೀಯೆಂಬ ಕಾರಣಕ್ಕೆ ಕರುಣೆ ತೋರಿದ ನಿದರ್ಶನ ರಾಮ ಎಷ್ಟು ಕರುಣಾಮೂರ್ತಿ ಎನ್ನುವುದನ್ನು ಸೂಚಿಸುತ್ತದೆ ಎಂದು ಬಣ್ಣಿಸಿದರು. ಶುಕ-ಸಾರಣರೆಂಬ ರಾವಣನ ಗುಪ್ತಚರರು ರಾಮಸೈನ್ಯದ ಅವಲೋಕನ ಮಾಡುವ ವೇಳೆ ಕಪಿಸೈನ್ಯದ ಕೈಯಲ್ಲಿ ಸಿಕ್ಕಿಹಾಕಿಕೊಂಡ ಸಂದರ್ಭದಲ್ಲಿ ರಾಜದೂತನನ್ನು ಹತ್ಯೆ ಮಾಡುವುದು ರಾಜನೀತಿಗೆ ವಿರುದ್ಧ ಎಂದು ರಾಮ ಬಿಟ್ಟು ಬಿಡುತ್ತಾನೆ. ಇದು ರಾಮ ಕಾರುಣ್ಯದ ಮತ್ತೊಂದು ಮುಖ ಎಂದರು.
ಖಡ್ಗಕ್ಕೆ ನಡುಗದ ಹೃದಯ ಕರುಣೆಗೆ ಕರಗೀತು: #ರಾಘವೇಶ್ವರಶ್ರೀ https://t.co/oFi75pGRIT#raghaveshwarashree @ShankaraPeetha
— theruralmirror (@ruralmirror) August 18, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel