ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯದಲ್ಲಿ ಶುಕ್ರವಾರ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿವಿ ಗುರುಕುಲದ ಮಕ್ಕಳಿಗೆ ಬಾಳೆಗೊನೆ ಸ್ಪರ್ಧೆ, ಮೊಸರು ಗಡಿಗೆ ಒಡೆಯುವುದು, ರಸಪ್ರಶ್ನೆ, ರಾಧಾ ಕೃಷ್ಣ ವೇಷ, ಮೊಸರು ಕಡೆಯುವುದು, ಹಗ್ಗ ಜಗ್ಗಾಟ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಕುಲದ ವಿದ್ಯಾರ್ಥಿಗಳಿಂದ ಕೋಲಾಟ, ಸುಧೀರ್ ಹೆಗಡೆಯವರಿಂದ ಬಾನ್ಸುರಿ ವಾದನ ನಡೆದವು. ರಾತ್ರಿ ಧಾರ್ಮಿಕ ವಿಧಿವಿಧಾನಗಳು, ಶ್ರೀಕೃಷ್ಣನ ತೊಟ್ಟಿಲೋತ್ಸವ ಮತ್ತಿತರ ಕಾರ್ಯಕ್ರಮಗಳು ನಡೆದವು.
ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವ್ಯವಸ್ಥಾ ಪರಿಷತ್ ಅಧ್ಯಕ್ಷ ಡಿ.ಡಿ.ಶರ್ಮಾ, ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಪ್ರಾಚಾರ್ಯ ಮಹೇಶ್ ಹೆಗಡೆ, ಉಪ ಪ್ರಾಚಾರ್ಯರಾದ ಸೌಭಾಗ್ಯ, ವಿಶ್ವೇಶ್ವರ ಮತ್ತಿತರರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…