ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯದಲ್ಲಿ ಶುಕ್ರವಾರ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿವಿ ಗುರುಕುಲದ ಮಕ್ಕಳಿಗೆ ಬಾಳೆಗೊನೆ ಸ್ಪರ್ಧೆ, ಮೊಸರು ಗಡಿಗೆ ಒಡೆಯುವುದು, ರಸಪ್ರಶ್ನೆ, ರಾಧಾ ಕೃಷ್ಣ ವೇಷ, ಮೊಸರು ಕಡೆಯುವುದು, ಹಗ್ಗ ಜಗ್ಗಾಟ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಕುಲದ ವಿದ್ಯಾರ್ಥಿಗಳಿಂದ ಕೋಲಾಟ, ಸುಧೀರ್ ಹೆಗಡೆಯವರಿಂದ ಬಾನ್ಸುರಿ ವಾದನ ನಡೆದವು. ರಾತ್ರಿ ಧಾರ್ಮಿಕ ವಿಧಿವಿಧಾನಗಳು, ಶ್ರೀಕೃಷ್ಣನ ತೊಟ್ಟಿಲೋತ್ಸವ ಮತ್ತಿತರ ಕಾರ್ಯಕ್ರಮಗಳು ನಡೆದವು.
ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವ್ಯವಸ್ಥಾ ಪರಿಷತ್ ಅಧ್ಯಕ್ಷ ಡಿ.ಡಿ.ಶರ್ಮಾ, ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಪ್ರಾಚಾರ್ಯ ಮಹೇಶ್ ಹೆಗಡೆ, ಉಪ ಪ್ರಾಚಾರ್ಯರಾದ ಸೌಭಾಗ್ಯ, ವಿಶ್ವೇಶ್ವರ ಮತ್ತಿತರರು ಉಪಸ್ಥಿತರಿದ್ದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…