ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯದಲ್ಲಿ ಶುಕ್ರವಾರ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿವಿ ಗುರುಕುಲದ ಮಕ್ಕಳಿಗೆ ಬಾಳೆಗೊನೆ ಸ್ಪರ್ಧೆ, ಮೊಸರು ಗಡಿಗೆ ಒಡೆಯುವುದು, ರಸಪ್ರಶ್ನೆ, ರಾಧಾ ಕೃಷ್ಣ ವೇಷ, ಮೊಸರು ಕಡೆಯುವುದು, ಹಗ್ಗ ಜಗ್ಗಾಟ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಕುಲದ ವಿದ್ಯಾರ್ಥಿಗಳಿಂದ ಕೋಲಾಟ, ಸುಧೀರ್ ಹೆಗಡೆಯವರಿಂದ ಬಾನ್ಸುರಿ ವಾದನ ನಡೆದವು. ರಾತ್ರಿ ಧಾರ್ಮಿಕ ವಿಧಿವಿಧಾನಗಳು, ಶ್ರೀಕೃಷ್ಣನ ತೊಟ್ಟಿಲೋತ್ಸವ ಮತ್ತಿತರ ಕಾರ್ಯಕ್ರಮಗಳು ನಡೆದವು.
ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವ್ಯವಸ್ಥಾ ಪರಿಷತ್ ಅಧ್ಯಕ್ಷ ಡಿ.ಡಿ.ಶರ್ಮಾ, ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಪ್ರಾಚಾರ್ಯ ಮಹೇಶ್ ಹೆಗಡೆ, ಉಪ ಪ್ರಾಚಾರ್ಯರಾದ ಸೌಭಾಗ್ಯ, ವಿಶ್ವೇಶ್ವರ ಮತ್ತಿತರರು ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…