ಕರವಾಳದ ಶಕ್ತಿಗಿಂತ ಕರುಣೆಯ ಶಕ್ತಿ ಅಧಿಕ. ದುಷ್ಟತನ, ಕ್ರೌರ್ಯದ ಸಂಕೇತವೇ ಆಗಿದ್ದ ಅಂಗುಲಿಮಾಲನಂಥವನನ್ನೂ ಪರಿವರ್ತಿಸಿದ್ದು, ಬುದ್ಧನ ಅಪೂರ್ವ ಕರುಣಾ ಶಕ್ತಿ. ಇಂಥ ಶಕ್ತಿ ಜಗತ್ತನ್ನು ಆಳುವಂತಾಗಬೇಕು. ನಮ್ಮೆಲ್ಲರ ಹೃದಯವನ್ನು ಕರುಣೆ ಆಳುವಂತಾಗಬೇಕು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು ರಾಮನ ಕಾರ್ಮುಖ (ಧನಸ್ಸು), ಕೃಷ್ಣನ ಯುಕ್ತಿ ಮತ್ತು ಬುದ್ಧನ ಕಾರುಣ್ಯ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ ಎಂದು ಬಣ್ಣಿಸಿದರು.
ಬುದ್ಧ ಹಾಗೂ ಅಂಗುಲಿಮಾಲ ಒಮ್ಮೆ ಪರಸ್ಪರ ಭೇಟಿಯಾಗುತ್ತಾರೆ. ಅಂಗುಲಿಮಾಲ ಕರವಾಳದ ಸಂಕೇತ. ಬುದ್ಧ ಕರುಣೆಯ ಸಂಕೇತ. ಬುದ್ಧ ಅಂಗುಲಿಮಾಲನ ಪ್ರದೇಶ ಪ್ರವೇಶಿಸುತ್ತಿದ್ದಂತೆಯೇ ಅಂಗುಲಿಮಾಲ ಆತನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಾನೆ. ಕೊಲ್ಲಲು ಮುಂದಾದ ಅಂಗುಲಿಮಾಲ ಬುದ್ಧನಲ್ಲಿ ಕೊನೆಯ ಆಸೆ ಏನೆಂದು ಕೇಳುತ್ತಾನೆ. ಆಗ ಅಪೇಕ್ಷೆಯ ಎರಡು ಭಾಗವಿದೆ. ಒಂದನೆಯದಾಗಿ ಎದುರು ಇರುವ ಮರದ ಕೊಂಬೆಯ ಮುರಿಯಬೇಕು ಎನ್ನುತ್ತಾನೆ. ಆಗ ಅಂಗುಲಿಮಾಲ ಸುಲಭವಾಗಿ ಮುರಿಯುತ್ತಾನೆ. ಅಪೇಕ್ಷೆಯ ಎರಡನೇ ಭಾಗವಾಗಿ ಕೊಂಬೆಯನ್ನು ಮರಳಿ ಜೋಡಿಸುವಂತೆ ಕೋರುತ್ತಾನೆ. ಆಗದು ಎಂದು ಅಂಗುಲಿಮಾಲ ಹೇಳಿದಾಗ, ಶ್ರೇಷ್ಠತೆ ಇರುವುದು ಜೀವ ತೆಗೆಯುವುದರಲ್ಲಿ ಅಲ್ಲ; ಜೀವ ನೀಡುವುದರಲ್ಲಿ ಎಂದು ಬುದ್ಧ ಹೇಳುತ್ತಾನೆ. ಈ ಘಟನೆ ಅಂಗುಲಿಮಾಲನನ್ನು ಭಿಕ್ಷುವಾಗಿ ಪರಿವರ್ತಿಸುತ್ತದೆ. ನಾರದರ ಕಾರುಣ್ಯದಿಂದ ಬೇಡ ರತ್ನಾಕರ ವಾಲ್ಮೀಕಿಯಾಗಿ ಪರಿವರ್ತನೆಯಾಗುತ್ತಾನೆ. ನಿನ್ನ ಸಂಪಾದನೆ, ಸಂಪತ್ತಿನಲ್ಲಿ ಪಾಲು ಪಡೆಯುವ ನಿನ್ನ ಪತ್ನಿ ಮತ್ತು ಮಕ್ಕಳು ನಿನ್ನ ಪಾಪದಲ್ಲೂ ಪಾಲು ಪಡೆಯುತ್ತಾರೆಯೇ ಎಂದು ನಾರದರು ಕೇಳಿದ ಒಂದು ಪ್ರಶ್ನೆ ರತ್ನಾಕರನನ್ನು ವಾಲ್ಮೀಕಿಯಾಗಿ ಬದಲಿಸಿತು ಎಂದು ಹೇಳಿದರು. ಕರುಣೆ ಎನ್ನುವುದು ದೌರ್ಬಲ್ಯವಲ್ಲ; ಅದು ಅದ್ಭುತ ಶಕ್ತಿ. ಇದಕ್ಕೆ ಮನಸ್ಸಿನ ಮೇಲೆ ನಿಗ್ರಹ ಅಗತ್ಯ. ಭೀತಿಯಿಂದ ಬಾಹ್ಯ ಪರಿವರ್ತನೆ ಮಾಡುವುದು ಸಾಧ್ಯವಾದರೆ, ಅಂತರ್ಯವನ್ನು ಗೆಲ್ಲಲು ಕೇವಲ ಪ್ರೀತಿಯಿಂದಷ್ಟೇ ಸಾಧ್ಯ ಎಂದು ವಿಶ್ಲೇಷಿಸಿದರು.ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…