ಧಾರ್ಮಿಕ

ಗೋಕರ್ಣದಲ್ಲಿ ಯುವ ಸೇವಾ ಸಮಾವೇಶ | ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು – ರೋಹಿತ್‌ ಚಕ್ರತೀರ್ಥ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು. ತೋರಿಕೆಯ ಸೇವೆ ಬೇಡ; ಇದರಿಂದ ಯಾವ ಉಪಯೋಗವೂ ಇಲ್ಲ. ಜಗತ್ತಿನ ಎಲ್ಲರಿಗೂ ಸಲ್ಲುವ ಸೇವೆ ನಿಜವಾದ ಸೇವೆ ಎಂದು ಅಂಕಣಕಾರ ರೋಹಿತ್ ಚಕ್ರತೀರ್ಥ ಹೇಳಿದರು.

Advertisement
Advertisement

ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು  ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಯುವ ಸೇವಾ ಸಮಾವೇಶದಲ್ಲಿ ಮಾತನಾಡಿದರು.

ಆರೆಸ್ಸೆಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ಸಮೂಹದ ಪರಿಕಲ್ಪನೆ ಭಾರತದಲ್ಲಿ ಮಾತ್ರ ಇದೆ. ಕಾಮ, ಕ್ರೋಧ, ಲೋಭ ಇವು ಮೂರು ನರಕಕ್ಕೆ ದಾರಿ. ಇವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಡೀ ವಿಶ್ವದ ವಿಕಾಸಕ್ಕೆ ಭಾರತದ ಕೊಡುಗೆ ಅಪಾರ. ಇದನ್ನು ಅರ್ಥ ಮಾಡಿಕೊಂಡು ಭಾರತೀಯ ಯುವ ಪೀಳಿಗೆ ಭಾರತೀಯ ಸಂಸ್ಕೃತಿ ಪರಂಪರೆಯ ಬಗ್ಗೆ ಗೌರವ ಹೊಂದಿ ಅದನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

Advertisement

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಸೇವೆಯಲ್ಲಿರುವ ಸಮಾಧಾನ, ಸಂತೋಷ ಭೋಗದಲ್ಲಿಲ್ಲ; ಯುವಶಕ್ತಿಯನ್ನು ಭೋಗದ ಜತೆ ಜೋಡಿಸದೇ, ಸೇವೆಯ ಜತೆ ಜೋಡಿಸುವ ಕಾರ್ಯ ಆಗಬೇಕು ಎಂದರು. ಯುವಶಕ್ತಿ ಮತ್ತು ಸೇವೆ ಇಂದಿನ ಸಮಾಜದಲ್ಲಿ ಅಪಮೌಲ್ಯವಾಗಿದೆ. ಪ್ರಕೃತಿಯ, ದೇಶದ, ಸಮಾಜದ ಮತ್ತು ನಮ್ಮಿಂದ ಶ್ರೇಷ್ಠರ ಸೇವೆ ಮಾಡುವ ಮೂಲಕ ನಮ್ಮ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಸೇವೆ ಮಾಡದಿದ್ದರೆ ಬದುಕು ಪೂರ್ಣವಾಗುವುದಿಲ್ಲ. ದೇಶಕ್ಕೆ, ದೇವರಿಗೆ, ಸಮಾಜಕ್ಕೆ, ಗುರುಸ್ಥಾನಕ್ಕೆ ಸೇವೆ ಮಾಡುವ ಸಂಕಲ್ಪ ತೊಡಿ. ಸೇವೆ ಇಲ್ಲದಿದ್ದರೆ ಜೀವನ ವ್ಯರ್ಥ. ಯುವಕರೆಲ್ಲ ಸೇವಕರಾಗಬೇಕು; ಸೇವಕರೆಲ್ಲ ಯುವಕರಾಗಿಯೇ ಇರಬೇಕು. ಮುಪ್ಪಿಗೆ ಮದ್ದು ಸೇವೆ. ಸೇವೆಯಿಂದ ನಾವು ಶಾಶ್ವತರಾಗುತ್ತೇವೆ. ಮುಪ್ಪು- ಸಾವುಗಳಿಲ್ಲದ ಸ್ಥಿತಿಗೆ ಬರಲು ಸಾಧ್ಯ. ಸೇವೆಯ ಮೂಲಕ ನಾವು ಅಜರಾಮರ, ಅಮರರಾಗಬಹುದು ಎಂದು ಹೇಳಿದರು.

ಶ್ರೇಷ್ಠತೆಯೇ ಯುವಕನ ಲಕ್ಷಣ. ಸೇವೆ ಮತ್ತು ಸಾಧನೆಯಿಂದಷ್ಟೇ ಯುವ ಹುಮ್ಮಸ್ಸು ಬರಲು ಸಾಧ್ಯ. ನೈಸರ್ಗಿಕ ಬಲ ಉಳ್ಳವನು ಯುವಕ. ಬೀಜವು ಮಣ್ಣು, ಗಾಳಿ, ಬೆಳಕಿನ ಆಸರೆಯಿಂದ ವಿಕಾಸ ಹೊಂದಿ ವೃಕ್ಷವಾಗಿ ಫಲ ಬಿಡುತ್ತದೆ. ಮರ ಮತ್ತೆ ಆ ಫಲವನ್ನು ಮತ್ತೆ ಭೂಮಿಗೆ ನೀಡುತ್ತದೆ. ಹಾಗೆಯೇ ಯುವಕರ ಶಕ್ತಿ ಕೂಡಾ ದೇವರು, ಸಮಾಜ, ದೇಶದಿಂದ ಬರುವಂಥದ್ದು. ವೃಕ್ಷ ತನ್ನ ಫಲವನ್ನು ಮತ್ತೆ ಪ್ರಕೃತಿಗೆ ಅರ್ಪಿಸುವಂತೆ ಯುವ ಶಕ್ತಿ ಕೂಡಾ ತಾನು ಬೆಳೆಯಲು ಕಾರಣವಾದ ಸಮಾಜಕ್ಕೆ ಸಮರ್ಪಿಸಿಕೊಳ್ಳಬೇಕು ಎಂದು ಆಶಿಸಿದರು.

ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹೇಶ್ ಕಜೆ,ಶ್ರೀ ಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು ಉಪಸ್ಥಿತರಿದ್ದರು.

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

3 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

3 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

7 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

8 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

9 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

13 hours ago