Advertisement
ಧಾರ್ಮಿಕ

ಗೋಕರ್ಣದಲ್ಲಿ ಯುವ ಸೇವಾ ಸಮಾವೇಶ | ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು – ರೋಹಿತ್‌ ಚಕ್ರತೀರ್ಥ |

Share

ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು. ತೋರಿಕೆಯ ಸೇವೆ ಬೇಡ; ಇದರಿಂದ ಯಾವ ಉಪಯೋಗವೂ ಇಲ್ಲ. ಜಗತ್ತಿನ ಎಲ್ಲರಿಗೂ ಸಲ್ಲುವ ಸೇವೆ ನಿಜವಾದ ಸೇವೆ ಎಂದು ಅಂಕಣಕಾರ ರೋಹಿತ್ ಚಕ್ರತೀರ್ಥ ಹೇಳಿದರು.

ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು  ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಯುವ ಸೇವಾ ಸಮಾವೇಶದಲ್ಲಿ ಮಾತನಾಡಿದರು.

ಆರೆಸ್ಸೆಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ಸಮೂಹದ ಪರಿಕಲ್ಪನೆ ಭಾರತದಲ್ಲಿ ಮಾತ್ರ ಇದೆ. ಕಾಮ, ಕ್ರೋಧ, ಲೋಭ ಇವು ಮೂರು ನರಕಕ್ಕೆ ದಾರಿ. ಇವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಡೀ ವಿಶ್ವದ ವಿಕಾಸಕ್ಕೆ ಭಾರತದ ಕೊಡುಗೆ ಅಪಾರ. ಇದನ್ನು ಅರ್ಥ ಮಾಡಿಕೊಂಡು ಭಾರತೀಯ ಯುವ ಪೀಳಿಗೆ ಭಾರತೀಯ ಸಂಸ್ಕೃತಿ ಪರಂಪರೆಯ ಬಗ್ಗೆ ಗೌರವ ಹೊಂದಿ ಅದನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಸೇವೆಯಲ್ಲಿರುವ ಸಮಾಧಾನ, ಸಂತೋಷ ಭೋಗದಲ್ಲಿಲ್ಲ; ಯುವಶಕ್ತಿಯನ್ನು ಭೋಗದ ಜತೆ ಜೋಡಿಸದೇ, ಸೇವೆಯ ಜತೆ ಜೋಡಿಸುವ ಕಾರ್ಯ ಆಗಬೇಕು ಎಂದರು. ಯುವಶಕ್ತಿ ಮತ್ತು ಸೇವೆ ಇಂದಿನ ಸಮಾಜದಲ್ಲಿ ಅಪಮೌಲ್ಯವಾಗಿದೆ. ಪ್ರಕೃತಿಯ, ದೇಶದ, ಸಮಾಜದ ಮತ್ತು ನಮ್ಮಿಂದ ಶ್ರೇಷ್ಠರ ಸೇವೆ ಮಾಡುವ ಮೂಲಕ ನಮ್ಮ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಸೇವೆ ಮಾಡದಿದ್ದರೆ ಬದುಕು ಪೂರ್ಣವಾಗುವುದಿಲ್ಲ. ದೇಶಕ್ಕೆ, ದೇವರಿಗೆ, ಸಮಾಜಕ್ಕೆ, ಗುರುಸ್ಥಾನಕ್ಕೆ ಸೇವೆ ಮಾಡುವ ಸಂಕಲ್ಪ ತೊಡಿ. ಸೇವೆ ಇಲ್ಲದಿದ್ದರೆ ಜೀವನ ವ್ಯರ್ಥ. ಯುವಕರೆಲ್ಲ ಸೇವಕರಾಗಬೇಕು; ಸೇವಕರೆಲ್ಲ ಯುವಕರಾಗಿಯೇ ಇರಬೇಕು. ಮುಪ್ಪಿಗೆ ಮದ್ದು ಸೇವೆ. ಸೇವೆಯಿಂದ ನಾವು ಶಾಶ್ವತರಾಗುತ್ತೇವೆ. ಮುಪ್ಪು- ಸಾವುಗಳಿಲ್ಲದ ಸ್ಥಿತಿಗೆ ಬರಲು ಸಾಧ್ಯ. ಸೇವೆಯ ಮೂಲಕ ನಾವು ಅಜರಾಮರ, ಅಮರರಾಗಬಹುದು ಎಂದು ಹೇಳಿದರು.

ಶ್ರೇಷ್ಠತೆಯೇ ಯುವಕನ ಲಕ್ಷಣ. ಸೇವೆ ಮತ್ತು ಸಾಧನೆಯಿಂದಷ್ಟೇ ಯುವ ಹುಮ್ಮಸ್ಸು ಬರಲು ಸಾಧ್ಯ. ನೈಸರ್ಗಿಕ ಬಲ ಉಳ್ಳವನು ಯುವಕ. ಬೀಜವು ಮಣ್ಣು, ಗಾಳಿ, ಬೆಳಕಿನ ಆಸರೆಯಿಂದ ವಿಕಾಸ ಹೊಂದಿ ವೃಕ್ಷವಾಗಿ ಫಲ ಬಿಡುತ್ತದೆ. ಮರ ಮತ್ತೆ ಆ ಫಲವನ್ನು ಮತ್ತೆ ಭೂಮಿಗೆ ನೀಡುತ್ತದೆ. ಹಾಗೆಯೇ ಯುವಕರ ಶಕ್ತಿ ಕೂಡಾ ದೇವರು, ಸಮಾಜ, ದೇಶದಿಂದ ಬರುವಂಥದ್ದು. ವೃಕ್ಷ ತನ್ನ ಫಲವನ್ನು ಮತ್ತೆ ಪ್ರಕೃತಿಗೆ ಅರ್ಪಿಸುವಂತೆ ಯುವ ಶಕ್ತಿ ಕೂಡಾ ತಾನು ಬೆಳೆಯಲು ಕಾರಣವಾದ ಸಮಾಜಕ್ಕೆ ಸಮರ್ಪಿಸಿಕೊಳ್ಳಬೇಕು ಎಂದು ಆಶಿಸಿದರು.

ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹೇಶ್ ಕಜೆ,ಶ್ರೀ ಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

9 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

9 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 days ago