Advertisement
ಧಾರ್ಮಿಕ

ಗೋಕರ್ಣದಲ್ಲಿ ಯುವ ಸೇವಾ ಸಮಾವೇಶ | ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು – ರೋಹಿತ್‌ ಚಕ್ರತೀರ್ಥ |

Share

ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು. ತೋರಿಕೆಯ ಸೇವೆ ಬೇಡ; ಇದರಿಂದ ಯಾವ ಉಪಯೋಗವೂ ಇಲ್ಲ. ಜಗತ್ತಿನ ಎಲ್ಲರಿಗೂ ಸಲ್ಲುವ ಸೇವೆ ನಿಜವಾದ ಸೇವೆ ಎಂದು ಅಂಕಣಕಾರ ರೋಹಿತ್ ಚಕ್ರತೀರ್ಥ ಹೇಳಿದರು.

ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು  ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಯುವ ಸೇವಾ ಸಮಾವೇಶದಲ್ಲಿ ಮಾತನಾಡಿದರು.

ಆರೆಸ್ಸೆಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ಸಮೂಹದ ಪರಿಕಲ್ಪನೆ ಭಾರತದಲ್ಲಿ ಮಾತ್ರ ಇದೆ. ಕಾಮ, ಕ್ರೋಧ, ಲೋಭ ಇವು ಮೂರು ನರಕಕ್ಕೆ ದಾರಿ. ಇವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಡೀ ವಿಶ್ವದ ವಿಕಾಸಕ್ಕೆ ಭಾರತದ ಕೊಡುಗೆ ಅಪಾರ. ಇದನ್ನು ಅರ್ಥ ಮಾಡಿಕೊಂಡು ಭಾರತೀಯ ಯುವ ಪೀಳಿಗೆ ಭಾರತೀಯ ಸಂಸ್ಕೃತಿ ಪರಂಪರೆಯ ಬಗ್ಗೆ ಗೌರವ ಹೊಂದಿ ಅದನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಸೇವೆಯಲ್ಲಿರುವ ಸಮಾಧಾನ, ಸಂತೋಷ ಭೋಗದಲ್ಲಿಲ್ಲ; ಯುವಶಕ್ತಿಯನ್ನು ಭೋಗದ ಜತೆ ಜೋಡಿಸದೇ, ಸೇವೆಯ ಜತೆ ಜೋಡಿಸುವ ಕಾರ್ಯ ಆಗಬೇಕು ಎಂದರು. ಯುವಶಕ್ತಿ ಮತ್ತು ಸೇವೆ ಇಂದಿನ ಸಮಾಜದಲ್ಲಿ ಅಪಮೌಲ್ಯವಾಗಿದೆ. ಪ್ರಕೃತಿಯ, ದೇಶದ, ಸಮಾಜದ ಮತ್ತು ನಮ್ಮಿಂದ ಶ್ರೇಷ್ಠರ ಸೇವೆ ಮಾಡುವ ಮೂಲಕ ನಮ್ಮ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಸೇವೆ ಮಾಡದಿದ್ದರೆ ಬದುಕು ಪೂರ್ಣವಾಗುವುದಿಲ್ಲ. ದೇಶಕ್ಕೆ, ದೇವರಿಗೆ, ಸಮಾಜಕ್ಕೆ, ಗುರುಸ್ಥಾನಕ್ಕೆ ಸೇವೆ ಮಾಡುವ ಸಂಕಲ್ಪ ತೊಡಿ. ಸೇವೆ ಇಲ್ಲದಿದ್ದರೆ ಜೀವನ ವ್ಯರ್ಥ. ಯುವಕರೆಲ್ಲ ಸೇವಕರಾಗಬೇಕು; ಸೇವಕರೆಲ್ಲ ಯುವಕರಾಗಿಯೇ ಇರಬೇಕು. ಮುಪ್ಪಿಗೆ ಮದ್ದು ಸೇವೆ. ಸೇವೆಯಿಂದ ನಾವು ಶಾಶ್ವತರಾಗುತ್ತೇವೆ. ಮುಪ್ಪು- ಸಾವುಗಳಿಲ್ಲದ ಸ್ಥಿತಿಗೆ ಬರಲು ಸಾಧ್ಯ. ಸೇವೆಯ ಮೂಲಕ ನಾವು ಅಜರಾಮರ, ಅಮರರಾಗಬಹುದು ಎಂದು ಹೇಳಿದರು.

ಶ್ರೇಷ್ಠತೆಯೇ ಯುವಕನ ಲಕ್ಷಣ. ಸೇವೆ ಮತ್ತು ಸಾಧನೆಯಿಂದಷ್ಟೇ ಯುವ ಹುಮ್ಮಸ್ಸು ಬರಲು ಸಾಧ್ಯ. ನೈಸರ್ಗಿಕ ಬಲ ಉಳ್ಳವನು ಯುವಕ. ಬೀಜವು ಮಣ್ಣು, ಗಾಳಿ, ಬೆಳಕಿನ ಆಸರೆಯಿಂದ ವಿಕಾಸ ಹೊಂದಿ ವೃಕ್ಷವಾಗಿ ಫಲ ಬಿಡುತ್ತದೆ. ಮರ ಮತ್ತೆ ಆ ಫಲವನ್ನು ಮತ್ತೆ ಭೂಮಿಗೆ ನೀಡುತ್ತದೆ. ಹಾಗೆಯೇ ಯುವಕರ ಶಕ್ತಿ ಕೂಡಾ ದೇವರು, ಸಮಾಜ, ದೇಶದಿಂದ ಬರುವಂಥದ್ದು. ವೃಕ್ಷ ತನ್ನ ಫಲವನ್ನು ಮತ್ತೆ ಪ್ರಕೃತಿಗೆ ಅರ್ಪಿಸುವಂತೆ ಯುವ ಶಕ್ತಿ ಕೂಡಾ ತಾನು ಬೆಳೆಯಲು ಕಾರಣವಾದ ಸಮಾಜಕ್ಕೆ ಸಮರ್ಪಿಸಿಕೊಳ್ಳಬೇಕು ಎಂದು ಆಶಿಸಿದರು.

ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹೇಶ್ ಕಜೆ,ಶ್ರೀ ಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

8 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

8 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

8 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

18 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago