Advertisement
ಧಾರ್ಮಿಕ

ಗೋಕರ್ಣದಲ್ಲಿ ಯುವ ಸೇವಾ ಸಮಾವೇಶ | ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು – ರೋಹಿತ್‌ ಚಕ್ರತೀರ್ಥ |

Share

ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು. ತೋರಿಕೆಯ ಸೇವೆ ಬೇಡ; ಇದರಿಂದ ಯಾವ ಉಪಯೋಗವೂ ಇಲ್ಲ. ಜಗತ್ತಿನ ಎಲ್ಲರಿಗೂ ಸಲ್ಲುವ ಸೇವೆ ನಿಜವಾದ ಸೇವೆ ಎಂದು ಅಂಕಣಕಾರ ರೋಹಿತ್ ಚಕ್ರತೀರ್ಥ ಹೇಳಿದರು.

Advertisement

ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು  ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಯುವ ಸೇವಾ ಸಮಾವೇಶದಲ್ಲಿ ಮಾತನಾಡಿದರು.

ಆರೆಸ್ಸೆಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ಸಮೂಹದ ಪರಿಕಲ್ಪನೆ ಭಾರತದಲ್ಲಿ ಮಾತ್ರ ಇದೆ. ಕಾಮ, ಕ್ರೋಧ, ಲೋಭ ಇವು ಮೂರು ನರಕಕ್ಕೆ ದಾರಿ. ಇವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಡೀ ವಿಶ್ವದ ವಿಕಾಸಕ್ಕೆ ಭಾರತದ ಕೊಡುಗೆ ಅಪಾರ. ಇದನ್ನು ಅರ್ಥ ಮಾಡಿಕೊಂಡು ಭಾರತೀಯ ಯುವ ಪೀಳಿಗೆ ಭಾರತೀಯ ಸಂಸ್ಕೃತಿ ಪರಂಪರೆಯ ಬಗ್ಗೆ ಗೌರವ ಹೊಂದಿ ಅದನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಸೇವೆಯಲ್ಲಿರುವ ಸಮಾಧಾನ, ಸಂತೋಷ ಭೋಗದಲ್ಲಿಲ್ಲ; ಯುವಶಕ್ತಿಯನ್ನು ಭೋಗದ ಜತೆ ಜೋಡಿಸದೇ, ಸೇವೆಯ ಜತೆ ಜೋಡಿಸುವ ಕಾರ್ಯ ಆಗಬೇಕು ಎಂದರು. ಯುವಶಕ್ತಿ ಮತ್ತು ಸೇವೆ ಇಂದಿನ ಸಮಾಜದಲ್ಲಿ ಅಪಮೌಲ್ಯವಾಗಿದೆ. ಪ್ರಕೃತಿಯ, ದೇಶದ, ಸಮಾಜದ ಮತ್ತು ನಮ್ಮಿಂದ ಶ್ರೇಷ್ಠರ ಸೇವೆ ಮಾಡುವ ಮೂಲಕ ನಮ್ಮ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಸೇವೆ ಮಾಡದಿದ್ದರೆ ಬದುಕು ಪೂರ್ಣವಾಗುವುದಿಲ್ಲ. ದೇಶಕ್ಕೆ, ದೇವರಿಗೆ, ಸಮಾಜಕ್ಕೆ, ಗುರುಸ್ಥಾನಕ್ಕೆ ಸೇವೆ ಮಾಡುವ ಸಂಕಲ್ಪ ತೊಡಿ. ಸೇವೆ ಇಲ್ಲದಿದ್ದರೆ ಜೀವನ ವ್ಯರ್ಥ. ಯುವಕರೆಲ್ಲ ಸೇವಕರಾಗಬೇಕು; ಸೇವಕರೆಲ್ಲ ಯುವಕರಾಗಿಯೇ ಇರಬೇಕು. ಮುಪ್ಪಿಗೆ ಮದ್ದು ಸೇವೆ. ಸೇವೆಯಿಂದ ನಾವು ಶಾಶ್ವತರಾಗುತ್ತೇವೆ. ಮುಪ್ಪು- ಸಾವುಗಳಿಲ್ಲದ ಸ್ಥಿತಿಗೆ ಬರಲು ಸಾಧ್ಯ. ಸೇವೆಯ ಮೂಲಕ ನಾವು ಅಜರಾಮರ, ಅಮರರಾಗಬಹುದು ಎಂದು ಹೇಳಿದರು.

ಶ್ರೇಷ್ಠತೆಯೇ ಯುವಕನ ಲಕ್ಷಣ. ಸೇವೆ ಮತ್ತು ಸಾಧನೆಯಿಂದಷ್ಟೇ ಯುವ ಹುಮ್ಮಸ್ಸು ಬರಲು ಸಾಧ್ಯ. ನೈಸರ್ಗಿಕ ಬಲ ಉಳ್ಳವನು ಯುವಕ. ಬೀಜವು ಮಣ್ಣು, ಗಾಳಿ, ಬೆಳಕಿನ ಆಸರೆಯಿಂದ ವಿಕಾಸ ಹೊಂದಿ ವೃಕ್ಷವಾಗಿ ಫಲ ಬಿಡುತ್ತದೆ. ಮರ ಮತ್ತೆ ಆ ಫಲವನ್ನು ಮತ್ತೆ ಭೂಮಿಗೆ ನೀಡುತ್ತದೆ. ಹಾಗೆಯೇ ಯುವಕರ ಶಕ್ತಿ ಕೂಡಾ ದೇವರು, ಸಮಾಜ, ದೇಶದಿಂದ ಬರುವಂಥದ್ದು. ವೃಕ್ಷ ತನ್ನ ಫಲವನ್ನು ಮತ್ತೆ ಪ್ರಕೃತಿಗೆ ಅರ್ಪಿಸುವಂತೆ ಯುವ ಶಕ್ತಿ ಕೂಡಾ ತಾನು ಬೆಳೆಯಲು ಕಾರಣವಾದ ಸಮಾಜಕ್ಕೆ ಸಮರ್ಪಿಸಿಕೊಳ್ಳಬೇಕು ಎಂದು ಆಶಿಸಿದರು.

ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹೇಶ್ ಕಜೆ,ಶ್ರೀ ಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

9 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

23 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

23 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago