Advertisement
ಧಾರ್ಮಿಕ

ಭಗವತ್ಕಾರುಣ್ಯಕ್ಕೆ ಜೀವ ಜಂತುಗಳ ಮೇಲಿನ ಪ್ರೀತಿ ಕಾರಣ: ರಾಘವೇಶ್ವರ ಶ್ರೀ

Share

ಪ್ರೇಮ ಇದ್ದಲ್ಲಿ ಕರುಣೆ ಇರುತ್ತದೆ. ನಮ್ಮ ಹಿತವನ್ನು ತ್ಯಾಗ ಮಾಡಿಯಾದರೂ, ಪರರ ಕಷ್ಟಕ್ಕೆ ಸ್ಪಂದಿಸಬೇಕು. ಇಂಥ ಗುಣಗಳನ್ನು ಪ್ರಾಣಿ, ಪಕ್ಷಿಗಳಿಂದ, ಲೋಕನಾಯಕ ಶಿವನಿಂದ ಪಡೆಯೋಣ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಪ್ರೇಮ ಹಾಗೂ ಕರುಣೆ ಪತಿ-ಪತ್ನಿ ಇದ್ದಂತೆ. ಜಗತ್ತಿನ ಮೇಲೆ ಪ್ರೀತಿ ಇಟ್ಟಿರುವ ಭಗವಂತ ಅಂಥ ಕರುಣೆಯನ್ನು ಜಗತ್ತಿನ ಎಲ್ಲ ಜೀವ ಜಂತುಗಳ ಮೇಲೆ ಹೊಂದಿರುತ್ತಾನೆ. ಇನ್ನೊಬ್ಬರ ಕಷ್ಟ ಪರಿಹಾರ ಮಾಡುವ ಸಲುವಾಗಿ ತಾವೇ ಸಂಕಷ್ಟವನ್ನು ತೆಗೆದುಕೊಳ್ಳುವವರು ಸತ್ಪುರುಷರು ಎಂದು ಬಣ್ಣಿಸಿದರು.
ಕರುಣಾಮೂರ್ತಿಗಳಾದ ಎಷ್ಟೋ ಸಂತರು ಬೇರೆಯವರ ಕಷ್ಟಗಳನ್ನು ತಾವೇ ಆವಾಹನೆ ಮಾಡಿಕೊಳ್ಳುತ್ತಾರೆ. ಪ್ರಪಂಚದ ಕಷ್ಟಗಳನ್ನು ರಾಮ, ಕೃಷ್ಣ, ಶಂಕರಾಚಾರ್ಯರು ಹೀಗೆ ಎಷ್ಟೋ ಮಹಾಪುರುಷರು ತಾವೇ ಪಡೆದುಕೊಂಡಿದ್ದಾರೆ. ಎಷ್ಟೋ ಭಕ್ತರ ಕಷ್ಟ ಮಾರ್ಗದರ್ಶನದಿಂದ ಪರಿಹಾರವಾಗುತ್ತದೆ. ಇಂಥ ಮಾರ್ಗದಿಂದ ಕೆಲವೊಮ್ಮೆ ಪರಿಹಾರವಾಗದಿದ್ದಾಗ ಅವರ ಪಾಪ, ದುಃಖವನ್ನು ತಾವು ಸ್ವೀಕರಿಸಿ ಅನುಭವಿಸುವ ಸಂದರ್ಭ ಮಹಾಪುರುಷರಿಗೆ ಬರುತ್ತದೆ ಎಂದು ವಿಶ್ಲೇಷಿಸಿದರು.
ಉತ್ತಮ ರಾಜ ಕೂಡಾ ತನ್ನ ಸುಖವನ್ನು ಪ್ರಜೆಗಳ ಜತೆ ಹಂಚಿಕೊಳ್ಳಬೇಕು. ಪ್ರಜೆಗಳ ಕಷ್ಟಗಳಿಗೆ ಸ್ಪಂದಿಸಬೇಕು. ಬದಲಾಗಿ ಜನರ ಸುಖದಲ್ಲಿ ಪಾಲು ಪಡೆಯುವಂತಿರಬಾರದು ಎನ್ನುವುದು ಭಾರತದ ಚಕ್ರವರ್ತಿಗಳ ಪರಿಕಲ್ಪನೆ ಎಂದು ಉದಾಹರಣೆ ಸಹಿತ ವಿವರಿಸಿದರು.
ಅಮೆರಿಕದ ಯೆಲ್ಲೋಸ್ಟೋನ್ ನ್ಯಾಷನಲ್ ಫಾರೆಸ್ಟ್‍ನಲ್ಲಿ ಕಾಳ್ಗಿಚ್ಚು ಹರಡಿದ ವೇಳೆ ಮರಗಿಡಗಳು, ಬಳ್ಳಿ, ಪ್ರಾಣಿ ಪಕ್ಷಿಗಳು ಸೇರಿದಂತೆ ಕ್ರಿಮಿಕೀಟಗಳು ಜೀವಂತ ಸಮಾಧಿಯಾದವು. ಅದರ ನಷ್ಟ ಅಂದಾಜಿಸಲು ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳುತ್ತಿರುವಾಗ ಸುಟ್ಟು ಕರಕಲಾದ ಪಕ್ಷಿಯ ಬೂದಿ ಅವರಿಗೆ ಪಕ್ಷಿಯ ಆಕೃತಿಯಲ್ಲೇ ಕಾಣುತ್ತದೆ. ಆ ಪಕ್ಷಿಯನ್ನು ನೋಡಿದಾಗ ತನ್ನ ರೆಕ್ಕೆ ಬಿಚ್ಚಿಟ್ಟುಕೊಂಡ ಭಂಗಿಯಲ್ಲೇ ಅದು ಭಸ್ಮವಾಗಿದ್ದವು. ಅದನ್ನು ಪರಾಂಬರಿಸಿ ನೋಡಿದಾಗ ಮೂರು ಪುಟ್ಟ ಮರಿಗಳು ಹೊರಗೆ ಬಂದವು. ಪರಿಸ್ಥಿತಿ ವೀಕ್ಷಿಸಿದಾಗ ಅಧಿಕಾರಿಗಳು ಧಾರಾಕಾರವಾಗಿ ಕಣ್ಣೀರು ಸುರಿಸಿದರು. ಕಾಳ್ಗಿಚ್ಚಿನ ಬೆಂಕಿ ಮತ್ತು ಹೊಗೆಯಿಂದ ತನ್ನ ಪುಟ್ಟ ಮರಿಗಳನ್ನು ರಕ್ಷಿಸುವ ಸಲುವಾಗಿ ಮರಿಗಳನ್ನು ಗುಂಪು ಸೇರಿಸಿ, ತನ್ನ ರೆಕ್ಕೆ ಹರಡಿ ಅದರ ಅಡಿಯಲ್ಲಿ ಮರಿಗಳನ್ನು ರಕ್ಷಿಸಿತ್ತು. ಬೆಂಕಿ ಬೆಂಕಿಯ ಝಳಕ್ಕೆ ಸುಟ್ಟು ಕರಕಲಾದಾಗಲೂ ತಾನು ಸ್ವಲ್ಪವೂ ಸರಿಯದೇ ಮರಿಗಳನ್ನು ಸುರಕ್ಷಿತವಾಗಿ ಕಾಪಾಡಿತ್ತು. ಮರಿಗಳ ಬಗೆಗಿನ ತಾಯಿಪಕ್ಷಿಯ ಕರುಣೆಯ ಪರಿ ಅಂಥದ್ದು ಎಂದು ಬಣ್ಣಿಸಿದರು.
ಇಂಥದ್ದೇ ಕಥೆ ರಾಮಾಯಣದಲ್ಲೂ ಕಂಡುಬರುತ್ತದೆ. ಅರುಣನ ಮಕ್ಕಳಾದ ಸಂಪಾತಿ ಮತ್ತು ಜಟಾಯು ಇಬ್ಬರೂ ಪಕ್ಷಿರಾಜರು. ಇಬ್ಬರಲ್ಲೂ ಒಮ್ಮೆ ಸ್ಪರ್ಧೆ ಹುಟ್ಟಿ ಹೆಚ್ಚು ವೇಗ ಹಾಗೂ ದೂರವಾಗಿ ಹಾರುತ್ತಾರೆ ಎಂಬ ಪೈಪೋಟಿ ಏರ್ಪಟ್ಟಿತು. ಅಸ್ತ ಪರ್ವತದ ವರೆಗೆ ಸೂರ್ಯನನ್ನು ಹಿಂಬಾಲಿಸುವ ಪಂಥಾಹ್ವಾನದಂತೆ ಇಬ್ಬರೂ ಮುಗಿಲು ದಾಟಿ ಬಾನೆತ್ತರಕ್ಕೆ ಹಾರುತ್ತವೆ. ಆಗ ಸೂರ್ಯರಶ್ಮಿಗಳು ಇಬ್ಬರನ್ನೂ ಸುಡಲು ಆರಂಭಿಸಿತು. ಸಹಿಸಲಸಾಧ್ಯ ಝಳದ ಸ್ಥಿತಿಯಲ್ಲಿ ಸಂಪಾತಿ ಕಣ್ಣು ಬಿಟ್ಟು ನೋಡಿದಾಗ ಜಟಾಯುವಿಗೆ ಹಾರಲು ಸಾಧ್ಯವಾಗಲಿಲ್ಲ. ತಮ್ಮ ಕೆಳಕ್ಕೆ ಬೀಳುತ್ತಿರುವುದು ನೋಡಿದಾಗ ಅಣ್ಣ ಸಂಪಾತಿ ತನ್ನ ರೆಕ್ಕೆಗಳಿಂದ ಆತನನ್ನು ಮುಚ್ಚಿಸಿ ರಕ್ಷಿಸಿದ ಎನ್ನುವ ಉಲ್ಲೇಖ ರಾಮಾಯಣದಲ್ಲಿದೆ. ತಮ್ಮನನ್ನು ರಕ್ಷಿಸುವ ಸಲುವಾಗಿ ಅಣ್ಣ ತನ್ನ ರೆಕ್ಕೆ ಸುಟ್ಟುಕೊಳ್ಳುತ್ತಾನೆ ಎಂದು ವಿವರಿಸಿದರು.
ಶಿವ ಕಷ್ಟವನ್ನು ತಾನೇ ಆವಾಹಿಸಿಕೊಂಡ ಮತ್ತೊಂದು ಅದ್ಭುತ ನಿದರ್ಶನ ನಮ್ಮ ಪುರಾಣದಲ್ಲಿದೆ. ಸಮದ್ರ ಮಥನದ ವೇಳೆ ಹೊರಬಂದ ಹಾಲಾಹಲವನ್ನು ಜೀವ ಜಂತುಗಳ ರಕ್ಷಣೆಗಾಗಿ ತಾನೇ ಪಾನ ಮಾಡುತ್ತಾನೆ. ಆದರೆ ವಿಷ ಕುಡಿದ ಶಿವ ಅಮೃತದಲ್ಲಿ ಎಂದೂ ಪಾಲು ಕೇಳಲಿಲ್ಲ. ಇಂಥ ಆದರ್ಶ ನಮ್ಮನ್ನು ಆಳುವವರದ್ದಾಗಬೇಕು ಎಂದು ಆಶಿಸಿದರು.
ದುರ್ಗಂಧಯುಕ್ತ ಗೊಬ್ಬರ ಸೇವಿಸುವ ಮರ ಗಿಡಗಳು ನಮಗೆ ನೀಡುವ ಫಲ ರುಚಿಯುಕ್ತ ಪರಿಮಳದ ಹಣ್ಣನ್ನು ನೀಡುತ್ತದೆ. ಆದರೆ ನರ, ಮರದಂತಿಲ್ಲ. ವೈಜ್ಞಾನಿಕವಾಗಿ ನೋಡಿದರೂ, ಇಂಗಾಲದ ಡೈಆಕ್ಸೈಡ್ ಸೇವಿಸಿ ಅಮೃತಮಯವಾದ ಶುದ್ಧ ಆಮ್ಲಜನಕವನ್ನು ನೀಡುತ್ತವೆ. ಆದರೆ ಮನುಷ್ಯ ಶುದ್ಧ ಗಾಳಿ ಸೇವಿಸಿ, ವಿಷಯುಕ್ತ ಗಾಳಿಯನ್ನು ಹೊರ ಸೂಸುತ್ತಾನೆ ಎಂದು ಮಾರ್ಮಿಕವಾಗಿ ನುಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

4 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

14 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

15 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

15 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago