ಸುದ್ದಿಗಳು

ತಪ್ಪು ಮಾಡದಿರುವುದು ಧೈರ್ಯದ ಮೂಲ: ರಾಘವೇಶ್ವರ ಶ್ರೀ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ ನಿಶ್ಚಿಂತೆಯಿಂದ, ಧೈರ್ಯದಿಂದ ಇರುತ್ತಾನೆ. ತಪ್ಪು ಮಾಡದಿರುವುದನ್ನು ರೂಢಿಸಿಕೊಂಡಲ್ಲಿ ಸಹಜವಾಗಿಯೇ ನಿಜವಾದ ಧೈರ್ಯ ನಮಗೆ ಬರುತ್ತದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ  ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು.

Advertisement
Advertisement
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಬದುಕಿನಲ್ಲಿ ಎಂಥ ವಿಘ್ನಗಳು ಬಂದರೂ ವಿಚಲಿತರಾಗದೇ ಧೈರ್ಯದಿಂದ ಎದುರಿಸುವ ಗುಣವನ್ನು ಅಳವಡಿಸಿಕೊಳ್ಳಬೇಕು. ಧೈರ್ಯಂ ಸರ್ವತ್ರ ಸಾಧನಂ ಎಂಬಂತೆ ಬದುಕಿನಲ್ಲಿ ಈ ಗುಣ ಎಲ್ಲೆಡೆ ಉಪಯೋಗಕ್ಕೆ ಬರುತ್ತದೆ. ಜೀವನ ಹಾಗೂ ಉಜ್ಜೀವನಕ್ಕೆ ಧೈರ್ಯ ಅನಿವಾರ್ಯ ಎಂದರು.
ಧೈರ್ಯ ಕಳೆದುಕೊಂಡು ಆ ಜಾಗದಲ್ಲಿ ಭಯ ಬಂದರೆ ಅದು ನಮ್ಮ ಅವಸಾನಕ್ಕೆ ಕಾರಣವಾಗುತ್ತದೆ. ಇಲ್ಲದ ಬಲವನ್ನು ತಂದುಕೊಡುವಂಥದ್ದು ಧೈರ್ಯ. ಆದರೆ ಇರುವ ಬಲವನ್ನು ಕುಗ್ಗಿಸುವಂಥದ್ದು ಭಯ ಎಂದು ಹೇಳಿದರು.
ಧೈರ್ಯ ಹಾಗೂ ಭಯ ಎಂಬ ಎರಡು ಭಾವಗಳು ನಮ್ಮೆಲ್ಲರ ಬದುಕಿನಲ್ಲಿ ಬರುತ್ತವೆ. ಧೈರ್ಯಂ ಸರ್ವತ್ರ ಸಾಧನಂ ಎಂಬಂತೆ ಈ ಗುಣ ಎಲ್ಲೆಡೆ ಉಪಯೋಗಕ್ಕೆ ಬರುವಂಥದ್ದು. ಕರುಣೆ, ಪ್ರೀತಿ ಮತ್ತಿತರ ಭಾವಗಳನ್ನು ವಿವೇಚನಾಯುಕ್ತವಾಗಿ ಬಳಸಬೇಕು. ಆದರೆ ಧೈರ್ಯ ಎಲ್ಲೆಡೆ ಬಳಕೆಯಾಗುವಂಥದ್ದು ಎಂದು ವಿಶ್ಲೇಷಿಸಿದರು.
ಧೈರ್ಯ ಇಲ್ಲದಿದ್ದರೆ ಏನು ಇದ್ದರೂ ಪ್ರಯೋಜನವಿಲ್ಲ. ಸ್ಥಿರವಾದ ಚಿತ್ತೋನ್ನತಿ ಧೈರ್ಯದ ಲಕ್ಷಣ. ಮತ್ತೆ ಮತ್ತೆ ವಿಘ್ನಗಳು ಬಂದು ಅಪ್ಪಳಿಸಿದರೂ ವಿಚಲಿತವಾಗದೇ ಇರುವ ಗುಣ ಇದು. ರಾಮ ಹಿಮಾಲಯ ಪರ್ವತದಂತೆ ಧೈರ್ಯವಂತ ಎಂಬ ಉಲ್ಲೇಖ ಇದೆ. ಭೂಕಂಪ, ಚಂಡಮಾರುತ ಅಪ್ಪಳಿಸಿದರೂ ವಿಚಲಿತವಾಗದೇ ಇರುವಂಥದ್ದು ಎಂಬ ಅರ್ಥ ಎಂದು ವಿವರಿಸಿದರು.
ಮೂರು ಬಗೆಯ ಜನರು ಇರುತ್ತಾರೆ. ಕೆಲವರು ಮುಂದೆ ವಿಘ್ನ ಬಂದರೆ ಎಂಬ ಭಯದಿಂದ ಕಾರ್ಯವನ್ನು ಆರಂಭಿಸುವುದೇ ಇಲ್ಲ. ಇವರು ಅಧಮರು. ಇನ್ನೊಂದು ವರ್ಗ ಕಾರ್ಯ ಆರಂಭಿಸಿ ವಿಘ್ನ ಬಂದಾಗ ನಿಲ್ಲಿಸುತ್ತಾರೆ. ಇವರು ಮಧ್ಯಮವರ್ಗಕ್ಕೆ ಸೇರುತ್ತಾರೆ. ಆದರೆ ಇನ್ನೊಂದು ವರ್ಗ ಮತ್ತೆ ಮತ್ತೆ ವಿಘ್ನಗಳು ಬಂದು ಅಪ್ಪಳಿಸಿದರೂ ವಿಚಲಿತರಾಗದವರು. ಇವರು ಉತ್ತಮೋತ್ತಮರು. ಇಂಥ ಧೈರ್ಯವನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
Advertisement
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಗೃಹಸಚಿವ ಆರಗ ಜ್ಞಾನೇಂದ್ರ , ಶಾಸಕ ದಿನಕರ ಶೆಟ್ಟಿಯವರು ಶ್ರೀಗಳ ಆಶೀರ್ವಾದ ಪಡೆದರು. ಗಾಣಿಗ ಸಮಾಜ, ಸಿದ್ದಿ ಸಮಾಜ ಮತ್ತು ದೇಶಭಂಡಾರಿ ಸಮಾಜಗಳ ವತಿಯಿಂದ ಭಾನುವಾರ ಪಾದಪೂಜೆ ನೆರವೇರಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

21 minutes ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

12 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

16 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago