ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ ನಿಶ್ಚಿಂತೆಯಿಂದ, ಧೈರ್ಯದಿಂದ ಇರುತ್ತಾನೆ. ತಪ್ಪು ಮಾಡದಿರುವುದನ್ನು ರೂಢಿಸಿಕೊಂಡಲ್ಲಿ ಸಹಜವಾಗಿಯೇ ನಿಜವಾದ ಧೈರ್ಯ ನಮಗೆ ಬರುತ್ತದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಬದುಕಿನಲ್ಲಿ ಎಂಥ ವಿಘ್ನಗಳು ಬಂದರೂ ವಿಚಲಿತರಾಗದೇ ಧೈರ್ಯದಿಂದ ಎದುರಿಸುವ ಗುಣವನ್ನು ಅಳವಡಿಸಿಕೊಳ್ಳಬೇಕು. ಧೈರ್ಯಂ ಸರ್ವತ್ರ ಸಾಧನಂ ಎಂಬಂತೆ ಬದುಕಿನಲ್ಲಿ ಈ ಗುಣ ಎಲ್ಲೆಡೆ ಉಪಯೋಗಕ್ಕೆ ಬರುತ್ತದೆ. ಜೀವನ ಹಾಗೂ ಉಜ್ಜೀವನಕ್ಕೆ ಧೈರ್ಯ ಅನಿವಾರ್ಯ ಎಂದರು.ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…