Advertisement
ಸುದ್ದಿಗಳು

ಜೀವನದಲ್ಲಿ ತಾಳ್ಮೆಯ ಪಾಠ ಕಲಿಯೋಣ | ರಾಘವೇಶ್ವರ ಶ್ರೀ

Share

ಕಾಲ ಪ್ರತೀಕ್ಷೆ ಎಲ್ಲ ಸಮಸ್ಯೆಗಳಿಗೆ ಪರಿಹಾರ; ತಾಳ್ಮೆಯ ಪಾಠವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಕಲಿಯೋಣ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ರಾಮ ತಾಳ್ಮೆಯ ಸಾಕಾರ ಮೂರ್ತಿ ಶ್ರೀರಾಮನಿಂದ ತಾಳ್ಮೆಯೆಂಬ ಮಹಾಗುಣವನ್ನು ಆಶೀರ್ವಾದವಾಗಿ ಪಡೆಯೋಣ. ತಾಳ್ಮೆಯ ಸಂಪತ್ತಿನಿಂದ ಎಲ್ಲ ಸಮಸ್ಯೆಗಳು ಪರಿಹಾರವಾಗುತ್ತವೆ. ತಾಳ್ಮೆಯೊಂದಿದ್ದರೆ ಶ್ರೇಯಸ್ಸು ನಮ್ಮನ್ನು ಅರಸಿಕೊಂಡು ಬರುತ್ತದೆ ಎನ್ನುವುದಕ್ಕೆ ಲಂಕೆಯ ಅಶೋಕಾವನದಲ್ಲಿ ಒಂದು ವರ್ಷ ರಾಮನ ಪ್ರತೀಕ್ಷೆಯಲ್ಲಿ ಕಳೆದ ಸೀತೆಯೇ ಉತ್ತಮ ಉದಾಹರಣೆ” ಎಂದು ಬಣ್ಣಿಸಿದರು.
ಹಲವಾರು ಸಮಸ್ಯೆಗಳಿಗೆ ಏನೂ ಮಾಡದಿರುವುದೇ ಪರಿಹಾರ. ಬಹಳಷ್ಟು ಸಮಸ್ಯೆಗಳನ್ನು ತಾಳ್ಮೆ ಬಗೆಹರಿಸುತ್ತದೆ ಅಥವಾ ಸಮಸ್ಯೆಗಳ ಪರಿಹಾರಕ್ಕೆ ನೆರವಾಗುತ್ತದೆ.

ಗುರುವಾಗಬೇಕಾದವನಿಗೆ ಮೊದಲ ಗುಣ ತಾಳ್ಮೆ; ತಾಳ್ಮೆ ಇಲ್ಲದವನು ಗುರುವಾಗಲಾರ. ಗುರುತ್ವಕ್ಕೆ ತಾಳ್ಮೆ ಅನಿವಾರ್ಯ. ಅದ್ಭುತ ವಸ್ತು ಕೈಯಲ್ಲಿದ್ದವರಿಗೆ ತಾಳ್ಮೆ, ವಿವೇಚನೆ ಅಗತ್ಯವಾಗುತ್ತದೆ. ದ್ರೋಣಾಚಾರ್ಯರು ಸ್ವಂತ ಮಗ ಅಶ್ವತ್ಥಾಮನಿಗೆ ನೀಡದ ಬ್ರಹ್ಮಶಿರೋ ಅಸ್ತ್ರವನ್ನು ಇಂದ್ರಿಯ ನಿಗ್ರಹ, ವಿವೇಚನೆ, ತಾಳ್ಮೆ ಇದ್ದ ಅರ್ಜುನನಿಗೆ ನೀಡುತ್ತಾರೆ ಎಂದು ಬಣ್ಣಿಸಿದರು.

ಚಾತುರ್ಮಾಸ್ಯ ಅಂಗವಾಗಿ ಬುಧವಾರ ರುದ್ರಹವನ, ರಾಮತಾರಕ ಹವನ, ಚಂಡಿ ಪಾರಾಯಣ, ಐಕ್ಯಮತ್ಯ ಹವನ, ಭಾಗ್ಯಸೂಕ್ತ ಹವನ ನಡೆಯಿತು. ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

40 minutes ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

1 hour ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

16 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

16 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

17 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

17 hours ago