ಕಾಲ ಪ್ರತೀಕ್ಷೆ ಎಲ್ಲ ಸಮಸ್ಯೆಗಳಿಗೆ ಪರಿಹಾರ; ತಾಳ್ಮೆಯ ಪಾಠವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಕಲಿಯೋಣ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ರಾಮ ತಾಳ್ಮೆಯ ಸಾಕಾರ ಮೂರ್ತಿ ಶ್ರೀರಾಮನಿಂದ ತಾಳ್ಮೆಯೆಂಬ ಮಹಾಗುಣವನ್ನು ಆಶೀರ್ವಾದವಾಗಿ ಪಡೆಯೋಣ. ತಾಳ್ಮೆಯ ಸಂಪತ್ತಿನಿಂದ ಎಲ್ಲ ಸಮಸ್ಯೆಗಳು ಪರಿಹಾರವಾಗುತ್ತವೆ. ತಾಳ್ಮೆಯೊಂದಿದ್ದರೆ ಶ್ರೇಯಸ್ಸು ನಮ್ಮನ್ನು ಅರಸಿಕೊಂಡು ಬರುತ್ತದೆ ಎನ್ನುವುದಕ್ಕೆ ಲಂಕೆಯ ಅಶೋಕಾವನದಲ್ಲಿ ಒಂದು ವರ್ಷ ರಾಮನ ಪ್ರತೀಕ್ಷೆಯಲ್ಲಿ ಕಳೆದ ಸೀತೆಯೇ ಉತ್ತಮ ಉದಾಹರಣೆ” ಎಂದು ಬಣ್ಣಿಸಿದರು.
ಹಲವಾರು ಸಮಸ್ಯೆಗಳಿಗೆ ಏನೂ ಮಾಡದಿರುವುದೇ ಪರಿಹಾರ. ಬಹಳಷ್ಟು ಸಮಸ್ಯೆಗಳನ್ನು ತಾಳ್ಮೆ ಬಗೆಹರಿಸುತ್ತದೆ ಅಥವಾ ಸಮಸ್ಯೆಗಳ ಪರಿಹಾರಕ್ಕೆ ನೆರವಾಗುತ್ತದೆ.
ಚಾತುರ್ಮಾಸ್ಯ ಅಂಗವಾಗಿ ಬುಧವಾರ ರುದ್ರಹವನ, ರಾಮತಾರಕ ಹವನ, ಚಂಡಿ ಪಾರಾಯಣ, ಐಕ್ಯಮತ್ಯ ಹವನ, ಭಾಗ್ಯಸೂಕ್ತ ಹವನ ನಡೆಯಿತು. ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…