ಕಾಲ ಪ್ರತೀಕ್ಷೆ ಎಲ್ಲ ಸಮಸ್ಯೆಗಳಿಗೆ ಪರಿಹಾರ; ತಾಳ್ಮೆಯ ಪಾಠವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಕಲಿಯೋಣ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ರಾಮ ತಾಳ್ಮೆಯ ಸಾಕಾರ ಮೂರ್ತಿ ಶ್ರೀರಾಮನಿಂದ ತಾಳ್ಮೆಯೆಂಬ ಮಹಾಗುಣವನ್ನು ಆಶೀರ್ವಾದವಾಗಿ ಪಡೆಯೋಣ. ತಾಳ್ಮೆಯ ಸಂಪತ್ತಿನಿಂದ ಎಲ್ಲ ಸಮಸ್ಯೆಗಳು ಪರಿಹಾರವಾಗುತ್ತವೆ. ತಾಳ್ಮೆಯೊಂದಿದ್ದರೆ ಶ್ರೇಯಸ್ಸು ನಮ್ಮನ್ನು ಅರಸಿಕೊಂಡು ಬರುತ್ತದೆ ಎನ್ನುವುದಕ್ಕೆ ಲಂಕೆಯ ಅಶೋಕಾವನದಲ್ಲಿ ಒಂದು ವರ್ಷ ರಾಮನ ಪ್ರತೀಕ್ಷೆಯಲ್ಲಿ ಕಳೆದ ಸೀತೆಯೇ ಉತ್ತಮ ಉದಾಹರಣೆ” ಎಂದು ಬಣ್ಣಿಸಿದರು.
ಹಲವಾರು ಸಮಸ್ಯೆಗಳಿಗೆ ಏನೂ ಮಾಡದಿರುವುದೇ ಪರಿಹಾರ. ಬಹಳಷ್ಟು ಸಮಸ್ಯೆಗಳನ್ನು ತಾಳ್ಮೆ ಬಗೆಹರಿಸುತ್ತದೆ ಅಥವಾ ಸಮಸ್ಯೆಗಳ ಪರಿಹಾರಕ್ಕೆ ನೆರವಾಗುತ್ತದೆ.
ಚಾತುರ್ಮಾಸ್ಯ ಅಂಗವಾಗಿ ಬುಧವಾರ ರುದ್ರಹವನ, ರಾಮತಾರಕ ಹವನ, ಚಂಡಿ ಪಾರಾಯಣ, ಐಕ್ಯಮತ್ಯ ಹವನ, ಭಾಗ್ಯಸೂಕ್ತ ಹವನ ನಡೆಯಿತು. ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…