ಕಾಲ ಪ್ರತೀಕ್ಷೆ ಎಲ್ಲ ಸಮಸ್ಯೆಗಳಿಗೆ ಪರಿಹಾರ; ತಾಳ್ಮೆಯ ಪಾಠವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಕಲಿಯೋಣ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ರಾಮ ತಾಳ್ಮೆಯ ಸಾಕಾರ ಮೂರ್ತಿ ಶ್ರೀರಾಮನಿಂದ ತಾಳ್ಮೆಯೆಂಬ ಮಹಾಗುಣವನ್ನು ಆಶೀರ್ವಾದವಾಗಿ ಪಡೆಯೋಣ. ತಾಳ್ಮೆಯ ಸಂಪತ್ತಿನಿಂದ ಎಲ್ಲ ಸಮಸ್ಯೆಗಳು ಪರಿಹಾರವಾಗುತ್ತವೆ. ತಾಳ್ಮೆಯೊಂದಿದ್ದರೆ ಶ್ರೇಯಸ್ಸು ನಮ್ಮನ್ನು ಅರಸಿಕೊಂಡು ಬರುತ್ತದೆ ಎನ್ನುವುದಕ್ಕೆ ಲಂಕೆಯ ಅಶೋಕಾವನದಲ್ಲಿ ಒಂದು ವರ್ಷ ರಾಮನ ಪ್ರತೀಕ್ಷೆಯಲ್ಲಿ ಕಳೆದ ಸೀತೆಯೇ ಉತ್ತಮ ಉದಾಹರಣೆ” ಎಂದು ಬಣ್ಣಿಸಿದರು.
ಹಲವಾರು ಸಮಸ್ಯೆಗಳಿಗೆ ಏನೂ ಮಾಡದಿರುವುದೇ ಪರಿಹಾರ. ಬಹಳಷ್ಟು ಸಮಸ್ಯೆಗಳನ್ನು ತಾಳ್ಮೆ ಬಗೆಹರಿಸುತ್ತದೆ ಅಥವಾ ಸಮಸ್ಯೆಗಳ ಪರಿಹಾರಕ್ಕೆ ನೆರವಾಗುತ್ತದೆ.
ಚಾತುರ್ಮಾಸ್ಯ ಅಂಗವಾಗಿ ಬುಧವಾರ ರುದ್ರಹವನ, ರಾಮತಾರಕ ಹವನ, ಚಂಡಿ ಪಾರಾಯಣ, ಐಕ್ಯಮತ್ಯ ಹವನ, ಭಾಗ್ಯಸೂಕ್ತ ಹವನ ನಡೆಯಿತು. ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು.
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…