ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ. ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ ಗೆಲ್ಲಲು ಕಷ್ಟಸಾಧ್ಯ ಎನಿಸಿದ ಶತ್ರು ಎಂದು ಧರ್ಮರಾಯ ಹೇಳಿದ ಉಲ್ಲೇಖ ಮಹಾಭಾರತದಲ್ಲಿದೆ. ಸಿಟ್ಟನ್ನು ಗೆಲ್ಲುವುದು ಸುಲಭವಲ್ಲ; ಅದಕ್ಕೆ ಸಾಧನೆ ಬೇಕು. ವಿಶ್ವಾಮಿತ್ರನಂಥವರೂ ಕಾಮ- ಕ್ರೋಧ ಗೆಲ್ಲಲು ಪಟ್ಟ ಕಷ್ಟ ಅಪಾರ ಎಂದು ಉದಾಹರಣೆ ಸಹಿತ ವಿವರಿಸಿದರು.
ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಕೇವಲ ದೇವರು ಅಥವಾ ಸಂತರಿಗೆ ಸಂಬಂಧಿಸಿದ್ದಲ್ಲ. ಜನಸಾಮಾನ್ಯರಿಗೂ ಅದು ಪ್ರಮುಖವಾಗುತ್ತದೆ. ನಾವು ತಪ್ಪು ಮಾಡುವುದು ಮನಸ್ಸಿನ ಹತೋಟಿ ಕಳೆದುಕೊಂಡಾಗ. ಆದ್ದರಿಂದ ಜೀವನ ಸರಿದಾರಿಯಲ್ಲಿ ಸಾಗಲು ನಮ್ಮ ಮನಸ್ಸಿನ ಮೇಲೆ ನಾವು ನಿಯಂತ್ರಣ ಸಾಧಿಸಬೇಕು ಎಂದು ಬಣ್ಣಿಸಿದರು.ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…