ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ. ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ ಗೆಲ್ಲಲು ಕಷ್ಟಸಾಧ್ಯ ಎನಿಸಿದ ಶತ್ರು ಎಂದು ಧರ್ಮರಾಯ ಹೇಳಿದ ಉಲ್ಲೇಖ ಮಹಾಭಾರತದಲ್ಲಿದೆ. ಸಿಟ್ಟನ್ನು ಗೆಲ್ಲುವುದು ಸುಲಭವಲ್ಲ; ಅದಕ್ಕೆ ಸಾಧನೆ ಬೇಕು. ವಿಶ್ವಾಮಿತ್ರನಂಥವರೂ ಕಾಮ- ಕ್ರೋಧ ಗೆಲ್ಲಲು ಪಟ್ಟ ಕಷ್ಟ ಅಪಾರ ಎಂದು ಉದಾಹರಣೆ ಸಹಿತ ವಿವರಿಸಿದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…