ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ. ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ ಗೆಲ್ಲಲು ಕಷ್ಟಸಾಧ್ಯ ಎನಿಸಿದ ಶತ್ರು ಎಂದು ಧರ್ಮರಾಯ ಹೇಳಿದ ಉಲ್ಲೇಖ ಮಹಾಭಾರತದಲ್ಲಿದೆ. ಸಿಟ್ಟನ್ನು ಗೆಲ್ಲುವುದು ಸುಲಭವಲ್ಲ; ಅದಕ್ಕೆ ಸಾಧನೆ ಬೇಕು. ವಿಶ್ವಾಮಿತ್ರನಂಥವರೂ ಕಾಮ- ಕ್ರೋಧ ಗೆಲ್ಲಲು ಪಟ್ಟ ಕಷ್ಟ ಅಪಾರ ಎಂದು ಉದಾಹರಣೆ ಸಹಿತ ವಿವರಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…