ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ. ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ ಗೆಲ್ಲಲು ಕಷ್ಟಸಾಧ್ಯ ಎನಿಸಿದ ಶತ್ರು ಎಂದು ಧರ್ಮರಾಯ ಹೇಳಿದ ಉಲ್ಲೇಖ ಮಹಾಭಾರತದಲ್ಲಿದೆ. ಸಿಟ್ಟನ್ನು ಗೆಲ್ಲುವುದು ಸುಲಭವಲ್ಲ; ಅದಕ್ಕೆ ಸಾಧನೆ ಬೇಕು. ವಿಶ್ವಾಮಿತ್ರನಂಥವರೂ ಕಾಮ- ಕ್ರೋಧ ಗೆಲ್ಲಲು ಪಟ್ಟ ಕಷ್ಟ ಅಪಾರ ಎಂದು ಉದಾಹರಣೆ ಸಹಿತ ವಿವರಿಸಿದರು.
ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಕೇವಲ ದೇವರು ಅಥವಾ ಸಂತರಿಗೆ ಸಂಬಂಧಿಸಿದ್ದಲ್ಲ. ಜನಸಾಮಾನ್ಯರಿಗೂ ಅದು ಪ್ರಮುಖವಾಗುತ್ತದೆ. ನಾವು ತಪ್ಪು ಮಾಡುವುದು ಮನಸ್ಸಿನ ಹತೋಟಿ ಕಳೆದುಕೊಂಡಾಗ. ಆದ್ದರಿಂದ ಜೀವನ ಸರಿದಾರಿಯಲ್ಲಿ ಸಾಗಲು ನಮ್ಮ ಮನಸ್ಸಿನ ಮೇಲೆ ನಾವು ನಿಯಂತ್ರಣ ಸಾಧಿಸಬೇಕು ಎಂದು ಬಣ್ಣಿಸಿದರು.ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…