ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ. ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ ಗೆಲ್ಲಲು ಕಷ್ಟಸಾಧ್ಯ ಎನಿಸಿದ ಶತ್ರು ಎಂದು ಧರ್ಮರಾಯ ಹೇಳಿದ ಉಲ್ಲೇಖ ಮಹಾಭಾರತದಲ್ಲಿದೆ. ಸಿಟ್ಟನ್ನು ಗೆಲ್ಲುವುದು ಸುಲಭವಲ್ಲ; ಅದಕ್ಕೆ ಸಾಧನೆ ಬೇಕು. ವಿಶ್ವಾಮಿತ್ರನಂಥವರೂ ಕಾಮ- ಕ್ರೋಧ ಗೆಲ್ಲಲು ಪಟ್ಟ ಕಷ್ಟ ಅಪಾರ ಎಂದು ಉದಾಹರಣೆ ಸಹಿತ ವಿವರಿಸಿದರು.
ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಕೇವಲ ದೇವರು ಅಥವಾ ಸಂತರಿಗೆ ಸಂಬಂಧಿಸಿದ್ದಲ್ಲ. ಜನಸಾಮಾನ್ಯರಿಗೂ ಅದು ಪ್ರಮುಖವಾಗುತ್ತದೆ. ನಾವು ತಪ್ಪು ಮಾಡುವುದು ಮನಸ್ಸಿನ ಹತೋಟಿ ಕಳೆದುಕೊಂಡಾಗ. ಆದ್ದರಿಂದ ಜೀವನ ಸರಿದಾರಿಯಲ್ಲಿ ಸಾಗಲು ನಮ್ಮ ಮನಸ್ಸಿನ ಮೇಲೆ ನಾವು ನಿಯಂತ್ರಣ ಸಾಧಿಸಬೇಕು ಎಂದು ಬಣ್ಣಿಸಿದರು.ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…