Advertisement
ಸುದ್ದಿಗಳು

ನಿಮ್ಮ ನಿಯಂತ್ರಣದಲ್ಲಿದ್ದರೆ ಕ್ರೋಧವೂ ದೋಷವಲ್ಲ- ರಾಘವೇಶ್ವರ ಶ್ರೀ |

Share

ಕ್ರೋಧದ ನಿಯಂತ್ರಣದಲ್ಲಿ ನೀವಿದ್ದಾಗ ಕ್ರೋಧ ದೋಷ. ನಿಮ್ಮ ನಿಯಂತ್ರಣದಲ್ಲಿ ಕೋಪ ಇದ್ದಾಗ ಅದು ಗುಣ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ವಿಶ್ಲೇಷಿಸಿದರು.

ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿ, ಕೋಪ ಇರುವುದು ಆತ್ಮರಕ್ಷಣೆಗೆ; ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನು ಉಂಟು ಮಾಡಬಾರದು. ನಮ್ಮ ನಿಯಂತ್ರಣದಲ್ಲಿರುವ ಕೋಪ ಪ್ರತಿಯೊಬ್ಬರಿಗೂ ಬೇಕು ಎಂದು ಮಾರ್ಮಿಕವಾಗಿ ನುಡಿದರು.

ರಾಮ ಸ್ಥಾನಕ್ರೋಧ- ಜಿತಕ್ರೋಧ ಎಂಬ ಉಲ್ಲೇಖ ರಾಮಾಯಣದಲ್ಲಿದೆ. ಅಂದರೆ ರಾಮ ಕ್ರೋಧವನ್ನು ಗೆದ್ದವನು. ಕ್ರೋಧ ನಮ್ಮ ವಶದಲ್ಲಿರಬೇಕು. ಆದ್ದರಿಂದ ಕ್ರೋಧವನ್ನು ಹತ್ತಿಕ್ಕುವುದು ಸಮಸ್ಯೆಗೆ ಪರಿಹಾರವಲ್ಲ. ಕ್ರೋಧವನ್ನು ನಮ್ಮ ನಿಯಂತ್ರಣದಲ್ಲಿದ್ದರೆ ಅದು ದೋಷವಲ್ಲ; ಗುಣ ಎಂದು ವಿಶ್ಲೇಷಿಸಿದರು. ಯಾರ ಬಗ್ಗೆ, ಯಾವಾಗ ಸಿಟ್ಟು ಮಾಡಬೇಕು ಎಂಬ ವಿವೇಚನೆ ಬೇಕು. ಅಗತ್ಯ ಬಿದ್ದಾಗ ಮಾತ್ರವೇ ಸಿಟ್ಟು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಉಕ್ಕಿಬರುವ ಕೋಪವನ್ನು ಯಾರು ನಿಗ್ರಹಿಸುತ್ತಾರೆಯೋ, ಕೋಪವೆಂಬ ಬೆಂಕಿಗೆ ತಾಳ್ಮೆಯ ನೀರನ್ನು ಯಾರು ಸುರಿಸುತ್ತಾರೆಯೋ ಅವರು ನಿಜವಾದ ಪುಣ್ಯಾತ್ಮರು ಎಂದು ಹನುಮಂತ ವಿವರಿಸಿದ್ದಾನೆ. ಸಿಟ್ಟು ಬಂದಾಗ ಎಂಥ ಕಾರ್ಯವನ್ನೂ ಮಾಡುತ್ತಾನೆ. ಸಿಟ್ಟಿಗಿಂತ ಕ್ಷಮೆ ದೊಡ್ಡದು ಎಂದು ಆಂಜನೇಯ ಬಣ್ಣಿಸಿದ್ದಾನೆ. ಹಾವು ಪೊರೆ ಕಳಚಿಕೊಳ್ಳುವಂತೆ ನಾವು ಸಿಟ್ಟನ್ನು ಬಿಡಬೇಕು ಎಂದು ಸಲಹೆ ಮಾಡಿದರು.
ಮಹಾಪುರುಷರೂ ಕ್ರೋಧಕ್ಕೆ ಒಳಗಾದ ನಿದರ್ಶನಗಳಿವೆ ಎಂದು ರಾಮಾಯಣದಲ್ಲಿ ರಾಮ ಕೋಪಗೊಂಡ ಸಂದರ್ಭಗಳನ್ನು ವಿವರಿಸಿದರು. ಖರ, ದೂಷಣರ ಸಂಹಾರದಲ್ಲಿ ರಾಮ ರಣಪಂಡಿತನಾದ ಎಂಬ ಉಲ್ಲೇಖ ರಾಮಾಯಣದಲ್ಲಿದೆ. ಸುತ್ತಮುತ್ತಲಿದ್ದ ರಕ್ಕಸ ಸೇನೆಯನ್ನು ಕಂಡು ರಾಕ್ಷಸ ಸಂಹಾರಕ್ಕಾಗಿ ಕ್ರೋಧವನ್ನು ಆವಾಹನೆ ಮಾಡಿಕೊಂಡ. ಕ್ರುದ್ಧನಾದ ರಾಮನನ್ನು ನೋಡಿದರೂ ಭಯವಾಗುವಂಥ ಭಯಂಕರ ರೂಪ ತಳೆದ ಎಂದು ವಿವರಿಸಿದರು.
ಅಂತೆಯೇ ಸಮುದ್ರ ರಾಜ ದಾರಿ ಕೊಡದಿದ್ದಾಗ ಅಂಥ ಭಯಂಕರ ಕೋಪ ರಾಮನಲ್ಲಿ ಕಂಡುಬಂದಿತ್ತು. ಸಮುದ್ರದ ಮೇಲೆ ಮೊದಲು ಯುದ್ಧ ಮಾಡಿ ನಂತರ ರಾವಣನನ್ನು ಎದುರಿಸೋಣ ಎಂದು ಲಕ್ಷ್ಮಣದಲ್ಲಿ ಹೇಳಿದ್ದ. ಸಮುದ್ರವನ್ನು ನಾಳೆ ದೂಳಾಗಿ ಮಾಡುತ್ತೇನೆ ಎಂದು ಘರ್ಜಿಸಿದ್ದ. ಅಂತೆಯೇ ರಾಮ- ರಾವಣರ ಯುದ್ಧದ ಕೊನೆಯ ಹಂತದಲ್ಲೂ ಕಣ್ಣಿನಿಂದ ರಾವಣನನ್ನು ಸುಟ್ಟು ಬಿಡುವಂತೆ ರಾಮ ನೋಡಿದ. ಅಂಥ ಕ್ರೋಧ ರಾಮನದ್ದಾಗಿತ್ತು ಎಂದು ವರ್ಣಿಸಿದರು.
ಅಖಿಲ ಭಾರತ ಹವ್ಯಕ ಮಹಾಸಭಾ ವತಿಯಿಂದ ಶ್ರೀ ಗುರುಭಿಕ್ಷಾ ಸೇವೆ ನಡೆಯಿತು. ಮುಕ್ರಿ ಸಮಾಜದ ವತಿಯಿಂದ ಪಾದಪೂಜೆ ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಸಿಪಿಐ ಆರ್.ಎನ್.ಮುಕ್ರಿಯವರು ಶ್ರೀಗಳಿಂದ ಆಶೀರ್ವಾದ ಪಡೆದರು. ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 625 ಅಂಕ ಪಡೆದ ಐದು ಮಂದಿ ವಿದ್ಯಾರ್ಥಿಗಳಿಗೆ ಅವರಷ್ಟೇ ಎತ್ತರದ ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ ಕಜೆ, ಮಂಜುನಾಥ ಸುವರ್ಣಗದ್ದೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಧಾರ್ಮಿಕ ಕಾರ್ಯಕ್ರಮದಲ್ಲಿ ರುದ್ರಹವನ, ರಾಮತಾರಕ ಹವನ, ಚಂಡೀಪಾರಾಯಣ, ನವಚಂಡಿ ಹವನ, ಗಣಪತಿ ಹವನ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

5 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

6 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

1 day ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago