ದೇವರು, ಗುರು, ತಂದೆ- ತಾಯಿಯ ಕಾರುಣ್ಯ ನಮ್ಮ ಜೀವನಕ್ಕೆ ಆಧಾರ. ಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ಆಶೀರ್ವಚನ ನೀಡಿದ ಅವರು, ಬಾಲ್ಯದಲ್ಲಿ ಅಸಹಾಯಕ ಸ್ಥಿತಿಯಲ್ಲಿರುವಾಗ ತಂದೆ ತಾಯಿಯ ಕರುಣೆ ನಮ್ಮನ್ನು ಬೆಳೆಸುತ್ತದೆ. ಅಂತೆಯೇ ಗುರು ನೀಡಿದ ಜ್ಞಾನದ ಬೆಳಕು ಇಡೀ ಬದುಕಿನಲ್ಲಿ ನಮಗೆ ದಾರಿದೀಪ. ವಿದ್ಯೆಯಿಂದ ಬರುವ ಜ್ಞಾನ ನಮ್ಮ ಇಡೀ ಬದುಕಿಗೆ ದಾರಿದೀಪ. ಆದರೆ ಅನ್ನ- ಆಹಾರದಿಂದ ನಮಗೆ ಸಿಗುವ ತೃಪ್ತಿ ಕ್ಷಣಿಕ ಎಂದು ಅಭಿಪ್ರಾಯಪಟ್ಟರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel