ದೇವರು, ಗುರು, ತಂದೆ- ತಾಯಿಯ ಕಾರುಣ್ಯ ನಮ್ಮ ಜೀವನಕ್ಕೆ ಆಧಾರ. ಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ಆಶೀರ್ವಚನ ನೀಡಿದ ಅವರು, ಬಾಲ್ಯದಲ್ಲಿ ಅಸಹಾಯಕ ಸ್ಥಿತಿಯಲ್ಲಿರುವಾಗ ತಂದೆ ತಾಯಿಯ ಕರುಣೆ ನಮ್ಮನ್ನು ಬೆಳೆಸುತ್ತದೆ. ಅಂತೆಯೇ ಗುರು ನೀಡಿದ ಜ್ಞಾನದ ಬೆಳಕು ಇಡೀ ಬದುಕಿನಲ್ಲಿ ನಮಗೆ ದಾರಿದೀಪ. ವಿದ್ಯೆಯಿಂದ ಬರುವ ಜ್ಞಾನ ನಮ್ಮ ಇಡೀ ಬದುಕಿಗೆ ದಾರಿದೀಪ. ಆದರೆ ಅನ್ನ- ಆಹಾರದಿಂದ ನಮಗೆ ಸಿಗುವ ತೃಪ್ತಿ ಕ್ಷಣಿಕ ಎಂದು ಅಭಿಪ್ರಾಯಪಟ್ಟರು.
ಬದುಕಿಗೆ ಕರುಣೆಯೇ ನಮ್ಮ ಬದುಕಿಗೆ ಆಧಾರ. ಈಶ್ವರನ ಕರುಣೆಯಿಂದಲೇ ನಾವೆಲ್ಲರೂ ಇದ್ದೇವೆ. “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನ, ನಿಮ್ಮ ದಾನವನುಂಡು ಅನ್ಯರ ಹೊಗಳುವ ಕುನ್ನಿಗಳನೇನೆಂಬೆ ರಾಮನಾಥ” ಎಂದು ದೇವರ ದಾಸಿಮಯ್ಯ ವಚನದಲ್ಲಿ ಬಣ್ಣಿಸಿದ್ದಾನೆ. ಈ ವಚನದ ಹಿಂದಿರುವುದು ದೇವರ ಕಾರುಣ್ಯದ ಬಣ್ಣನೆ ಎಂದರು. ಗುರು, ದೇವರು, ತಾಯಿ- ತಂದೆಯ ಕರುಣೆಯ ಋಣವನ್ನು ನಾವ್ಯಾರೂ ತೀರಿಸಲಾಗದು; ನಾವು ಬದುಕಿನಲ್ಲಿ ತಪ್ಪು ಮಾಡಿದ ಬಳಿಕವಂತೂ ಕರುಣೆಯಿಂದಲೇ ಬದುಕುತ್ತೇವೆ. ಜೀವನದಲ್ಲಿ ತಪ್ಪು ಮಾಡದವನು ಯಾರೂ ಇಲ್ಲ; ತಪ್ಪು ಮಾಡದವರು ಇಲ್ಲಿಗೆ ಬರುವುದೇ ಇಲ್ಲ; ಪಾಪ- ಪುಣ್ಯ ಮಾಡಿದವರು ಮಾಡಿದವರು ಮಾತ್ರ ಮನುಷ್ಯ ಜನ್ಮ ಪಡೆಯುತ್ತಾರೆ. ಆದ್ದರಿಂದ ಎಲ್ಲರ ಬದುಕಿಗೂ ಕರುಣೆ ಆಧಾರ ಎಂದು ವಿಶ್ಲೇಷಿಸಿದರು. ಎಲ್ಲ ಜೀವಗಳಲ್ಲಿ ದೇವರೇ ಇರುತ್ತಾನೆ ಎಂಬ ಭಾವವೊಂದಿದ್ದರೆ ನಾವು ಯಾರಿಗೂ ನೋವು ಮಾಡುವುದಿಲ್ಲ. ಯಾರನ್ನೇ ನೋಯಿಸಿದರೂ ನಾವು ದೇವರನ್ನು ನೋಯಿಸಿದಂತಾಗುತ್ತದೆ. ನಮಗೆ ಹೇಗೆ ನಮಗೆ ಇಷ್ಟವೋ ಎಲ್ಲ ಜೀವವೂ ಹಾಗೆಯೇ ಎಂಬ ಭಾವ ಇದ್ದರೆ ಸರ್ವತ್ರವೂ ದಯಾಭಾವ ಮೂಡುತ್ತದೆ ಎಂದು ಬಣ್ಣಿಸಿದರು. ಹೊನ್ನಾವರದ ವಾಗ್ದೇವಿ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮತಾರಕ ಹವನ, ರುದ್ರಹೋಮ ನೆರವೇರಿಸಲಾಯಿತು.2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…