Advertisement
ಧಾರ್ಮಿಕ

ಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ : ರಾಘವೇಶ್ವರ ಶ್ರೀ

Share

ದೇವರು, ಗುರು, ತಂದೆ- ತಾಯಿಯ ಕಾರುಣ್ಯ ನಮ್ಮ ಜೀವನಕ್ಕೆ ಆಧಾರ. ಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ  ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.

ಗೋಕರ್ಣದ  ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ಆಶೀರ್ವಚನ ನೀಡಿದ ಅವರು, ಬಾಲ್ಯದಲ್ಲಿ ಅಸಹಾಯಕ ಸ್ಥಿತಿಯಲ್ಲಿರುವಾಗ ತಂದೆ ತಾಯಿಯ ಕರುಣೆ ನಮ್ಮನ್ನು ಬೆಳೆಸುತ್ತದೆ. ಅಂತೆಯೇ ಗುರು ನೀಡಿದ ಜ್ಞಾನದ ಬೆಳಕು ಇಡೀ ಬದುಕಿನಲ್ಲಿ ನಮಗೆ ದಾರಿದೀಪ. ವಿದ್ಯೆಯಿಂದ ಬರುವ ಜ್ಞಾನ ನಮ್ಮ ಇಡೀ ಬದುಕಿಗೆ ದಾರಿದೀಪ. ಆದರೆ ಅನ್ನ- ಆಹಾರದಿಂದ ನಮಗೆ ಸಿಗುವ ತೃಪ್ತಿ ಕ್ಷಣಿಕ ಎಂದು ಅಭಿಪ್ರಾಯಪಟ್ಟರು.

ಬದುಕಿಗೆ ಕರುಣೆಯೇ ನಮ್ಮ ಬದುಕಿಗೆ ಆಧಾರ. ಈಶ್ವರನ ಕರುಣೆಯಿಂದಲೇ ನಾವೆಲ್ಲರೂ ಇದ್ದೇವೆ. “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನ, ನಿಮ್ಮ ದಾನವನುಂಡು ಅನ್ಯರ ಹೊಗಳುವ ಕುನ್ನಿಗಳನೇನೆಂಬೆ ರಾಮನಾಥ” ಎಂದು ದೇವರ ದಾಸಿಮಯ್ಯ ವಚನದಲ್ಲಿ ಬಣ್ಣಿಸಿದ್ದಾನೆ. ಈ ವಚನದ ಹಿಂದಿರುವುದು ದೇವರ ಕಾರುಣ್ಯದ ಬಣ್ಣನೆ ಎಂದರು.
ಗುರು, ದೇವರು, ತಾಯಿ- ತಂದೆಯ ಕರುಣೆಯ ಋಣವನ್ನು ನಾವ್ಯಾರೂ ತೀರಿಸಲಾಗದು; ನಾವು ಬದುಕಿನಲ್ಲಿ ತಪ್ಪು ಮಾಡಿದ ಬಳಿಕವಂತೂ ಕರುಣೆಯಿಂದಲೇ ಬದುಕುತ್ತೇವೆ. ಜೀವನದಲ್ಲಿ ತಪ್ಪು ಮಾಡದವನು ಯಾರೂ ಇಲ್ಲ; ತಪ್ಪು ಮಾಡದವರು ಇಲ್ಲಿಗೆ ಬರುವುದೇ ಇಲ್ಲ; ಪಾಪ- ಪುಣ್ಯ ಮಾಡಿದವರು ಮಾಡಿದವರು ಮಾತ್ರ ಮನುಷ್ಯ ಜನ್ಮ ಪಡೆಯುತ್ತಾರೆ. ಆದ್ದರಿಂದ ಎಲ್ಲರ ಬದುಕಿಗೂ ಕರುಣೆ ಆಧಾರ ಎಂದು ವಿಶ್ಲೇಷಿಸಿದರು.
ಎಲ್ಲ ಜೀವಗಳಲ್ಲಿ ದೇವರೇ ಇರುತ್ತಾನೆ ಎಂಬ ಭಾವವೊಂದಿದ್ದರೆ ನಾವು ಯಾರಿಗೂ ನೋವು ಮಾಡುವುದಿಲ್ಲ. ಯಾರನ್ನೇ ನೋಯಿಸಿದರೂ ನಾವು ದೇವರನ್ನು ನೋಯಿಸಿದಂತಾಗುತ್ತದೆ. ನಮಗೆ ಹೇಗೆ ನಮಗೆ ಇಷ್ಟವೋ ಎಲ್ಲ ಜೀವವೂ ಹಾಗೆಯೇ ಎಂಬ ಭಾವ ಇದ್ದರೆ ಸರ್ವತ್ರವೂ ದಯಾಭಾವ ಮೂಡುತ್ತದೆ ಎಂದು ಬಣ್ಣಿಸಿದರು.
ಹೊನ್ನಾವರದ ವಾಗ್ದೇವಿ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮತಾರಕ ಹವನ, ರುದ್ರಹೋಮ ನೆರವೇರಿಸಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 hour ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

10 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

16 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

16 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

16 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

17 hours ago