ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ನಮ್ಮ ರಾಷ್ಟ್ರಕ್ಕೆ ಶ್ರೇಷ್ಠ ಧರ್ಮಯೋಧರನ್ನು ಸೃಷ್ಟಿಸಿ, ಸಮರ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಮಾಡುವ ದಾನ ಕೂಡಾ ನಿಜವಾದ ರಾಷ್ಟ್ರಸೇವೆ. ಅದು ಸರ್ವಶ್ರೇಷ್ಠ ಎಂದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.
Advertisement
ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶುಕ್ರವಾರ ನಡೆದ ಎಂಟನೇ ದಾನ- ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದಾನ ಎನ್ನುವುದು ಲಕ್ಷ್ಮಿಯ ಶ್ರೇಷ್ಠ ರೂಪ. ಸತ್ಕಾರ್ಯಗಳಿಗೆ ನೀಡುವ ದಾನ ನಮಗೆ ಪುಣ್ಯಫಲ ನೀಡಿದರೆ, ನಾವು ಮಾಡಿದ ದಾನ ದುರ್ವಿನಿಯೋಗವಾದರೆ ಅದರ ಪಾಪ ನಮಗೂ ತಟ್ಟುತ್ತದೆ. ಆದ್ದರಿಂದ ಸ್ಥಳ, ಸಮಯ, ಸಂದರ್ಭ ನೋಡಿ ಯೋಗ್ಯರಾದವರಿಗೆ ದಾನ ಮಾಡಬೇಕು ಎಂದು ಸಲಹೆ ಮಾಡಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement