ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ನಮ್ಮ ರಾಷ್ಟ್ರಕ್ಕೆ ಶ್ರೇಷ್ಠ ಧರ್ಮಯೋಧರನ್ನು ಸೃಷ್ಟಿಸಿ, ಸಮರ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಮಾಡುವ ದಾನ ಕೂಡಾ ನಿಜವಾದ ರಾಷ್ಟ್ರಸೇವೆ. ಅದು ಸರ್ವಶ್ರೇಷ್ಠ ಎಂದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.
ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶುಕ್ರವಾರ ನಡೆದ ಎಂಟನೇ ದಾನ- ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದಾನ ಎನ್ನುವುದು ಲಕ್ಷ್ಮಿಯ ಶ್ರೇಷ್ಠ ರೂಪ. ಸತ್ಕಾರ್ಯಗಳಿಗೆ ನೀಡುವ ದಾನ ನಮಗೆ ಪುಣ್ಯಫಲ ನೀಡಿದರೆ, ನಾವು ಮಾಡಿದ ದಾನ ದುರ್ವಿನಿಯೋಗವಾದರೆ ಅದರ ಪಾಪ ನಮಗೂ ತಟ್ಟುತ್ತದೆ. ಆದ್ದರಿಂದ ಸ್ಥಳ, ಸಮಯ, ಸಂದರ್ಭ ನೋಡಿ ಯೋಗ್ಯರಾದವರಿಗೆ ದಾನ ಮಾಡಬೇಕು ಎಂದು ಸಲಹೆ ಮಾಡಿದರು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…