Advertisement
ಸುದ್ದಿಗಳು

ವಿದ್ಯೆಗೆ ಮಾಡುವ ದಾನ ಸರ್ವಶ್ರೇಷ್ಠ : ರಾಘವೇಶ್ವರ ಶ್ರೀ

Share

ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ನಮ್ಮ ರಾಷ್ಟ್ರಕ್ಕೆ ಶ್ರೇಷ್ಠ ಧರ್ಮಯೋಧರನ್ನು ಸೃಷ್ಟಿಸಿ, ಸಮರ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಮಾಡುವ ದಾನ ಕೂಡಾ ನಿಜವಾದ ರಾಷ್ಟ್ರಸೇವೆ. ಅದು ಸರ್ವಶ್ರೇಷ್ಠ ಎಂದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.

ಅವರು ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶುಕ್ರವಾರ ನಡೆದ ಎಂಟನೇ ದಾನ- ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದಾನ ಎನ್ನುವುದು ಲಕ್ಷ್ಮಿಯ ಶ್ರೇಷ್ಠ ರೂಪ. ಸತ್ಕಾರ್ಯಗಳಿಗೆ ನೀಡುವ ದಾನ ನಮಗೆ ಪುಣ್ಯಫಲ ನೀಡಿದರೆ, ನಾವು ಮಾಡಿದ ದಾನ ದುರ್ವಿನಿಯೋಗವಾದರೆ ಅದರ ಪಾಪ ನಮಗೂ ತಟ್ಟುತ್ತದೆ. ಆದ್ದರಿಂದ ಸ್ಥಳ, ಸಮಯ, ಸಂದರ್ಭ ನೋಡಿ ಯೋಗ್ಯರಾದವರಿಗೆ ದಾನ ಮಾಡಬೇಕು ಎಂದು ಸಲಹೆ ಮಾಡಿದರು.

ಸತ್ಪಾತ್ರರಿಗೆ ದಾನ ಮಾಡಿದ ಬಳಿಕ ಉಳಿದದ್ದನ್ನು ಅನುಭವಿಸಬೇಕು ಎಂದು ಶಾಸ್ತ್ರ ಹೇಳುತ್ತದೆ; ಕೊಟ್ಟು ತಿನ್ನುವುದು ಭಾರತೀಯ ಸಂಸ್ಕೃತಿ ಎಂದು ಬಣ್ಣಿಸಿದರು. ನಮ್ಮದು ಅಂದುಕೊಂಡಿದ್ದನ್ನು ಬಿಟ್ಟುಕೊಡುವ ಕಾರ್ಯ ಸಣ್ಣದಲ್ಲ. ಆದ್ದರಿಂದ ದಾನ ಎಲ್ಲಕ್ಕಿಂತ ಕಠಿಣ. ದಾನದ ಮುಂದಿನ ಹೆಜ್ಜೆಯೇ ಮಾನ. ದಾನವೇ ಮಾನವಾಗಿ ಪರಿಣಮಿಸುತ್ತದೆ. ನಮಗೆ ಜೀವನವನ್ನು ಕೊಟ್ಟ ಭಗವಂತ ಸದಾ ನಮ್ಮನ್ನು ಅಳೆಯುತ್ತಾ ಇರುತ್ತಾನೆ. ಆತನ ಅಳತೆಯಲ್ಲಿ ನಾವೆಂದೂ ಕಡಿಮೆಯಾಗಬಾರದು. ಸತ್ಪಾತ್ರರಿಗೆ ದಾನ ಮಾಡುವ ಮೂಲಕ ಭಗವಂತನ ಮೆಚ್ಚುಗೆಗೆ ನಾವು ಪಾತ್ರರಾಗಬೇಕು ಎಂದರು.
ಪೂಜೆ ಮಾಡಿದ ಬಳಿಕ ಪ್ರಸಾದ ಸಿಕ್ಕುವ ಹಾಗೆ ದಾನ ಮಾಡಿದವರಿಗೆ ಆಶೀರ್ವಾದಪೂರ್ವಕವಾಗಿ ಮಾನ ಸಲ್ಲುತ್ತದೆ; ಭಗವಂತ ಕೊಟ್ಟದ್ದನ್ನು ಅವನ ಕಾರ್ಯಕ್ಕೆ ಬಿಟ್ಟುಕೊಡುವುದು ನಿಜವಾದ ದಾನ; ಲಕ್ಷ್ಮಿಗೆ ಲಕ್ಷ ರೂಪ; ಲಕ್ಷ್ಮಿ ಬಗೆಬಗೆಯ ರೂಪ ತಾಳುತ್ತಾಳೆ; ಅನ್ನ, ಅರಿವೆ, ಆಶ್ರಯ, ವಿದ್ಯೆ ಹೀಗೆ ಲಕ್ಷ್ಮಿಗೆ ಹಲವು ರೂಪ. ಆದರೆ ಯಾವುದು ಹೆಚ್ಚಿದರೂ ತೊಂದರೆ. ಬದುಕಿನಲ್ಲಿ ಯಾವ ಸೌಲಭ್ಯಗಳೂ ಅಗತ್ಯಕ್ಕಿಂತ ಹೆಚ್ಚಾದಾಗ ಅದು ತೊಂದರೆಯಾಗುತ್ತದೆ ಎಂದು ವಿಶ್ಲೇಷಿಸಿದರು.
ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿ, ಶ್ರೀ ಸನ್ನಿಧಿ ನಮಗೆ ಎಲ್ಲವನ್ನೂ ಒದಗಿಸುತ್ತದೆ. ಆದ್ದರಿಂದ ನಮ್ಮ ಸಂಪಾದನೆಯ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು. ಶ್ರೀಗಳು ಕೈಗೊಂಡ ಸತ್ಕಾರ್ಯಗಳಿಗೆ ಇಂಥ ದಾನ ಸಂದರೆ ಅದು ಸರ್ವಶ್ರೇಷ್ಠ ಎಂದು ಬಣ್ಣಿಸಿದರು. ದಾನವನ್ನು ಎಲ್ಲಿ ಕೊಡಬೇಕು; ಯಾವ ಕಾರ್ಯಕ್ಕೆ ಕೊಡಬೇಕು ಎಂಬ ಸರಿಯಾದ ನಿರ್ಧಾರ ಕೈಗೊಳ್ಳುವುದು ಅತ್ಯಂತ ಮುಖ್ಯ. ಎಷ್ಟು ಕೊಟ್ಟೆ ಎನ್ನುವುದಕ್ಕಿಂತ ಯಾವುದಕ್ಕೆ ಕೊಟ್ಟೆ ಎನ್ನುವುದು ಮತ್ತು ಕೊಡುವ ಭಾವ ಅತ್ಯಂತ ಮುಖ್ಯ ಎಂದು ಅಭಿಪ್ರಾಯಪಟ್ಟರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

6 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

7 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

24 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago