Advertisement
ಸುದ್ದಿಗಳು

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

Share

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ. ಮನೆಗೆ ಸುಭದ್ರ ಅಡಿಪಾಯ ಹೇಗೆ ಅಗತ್ಯವೋ ನಮ್ಮ ಬದುಕಿಗೂ ಧರ್ಮದ ತಳಹದಿ ಅಗತ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಶುಕ್ರವಾರ ಸಿದ್ದಾಪುರ ಮಂಡಲದ ಬಾನ್ಕುಳಿ, ಇಟಗಿ, ದೊಡ್ಮನೆ, ಚಪ್ಪರಮನೆ, ತಾಳಗುಪ್ಪ ಮತ್ತು ಇಡುವಾಣಿ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ಗೋಡೆ ಎಂದರೆ ಸಂಪತ್ತು; ಛಾವಣಿ ಎನ್ನುವುದು ಕಾಮನೆಗಳು. ಧರ್ಮದ ತಳಹದಿ ಇದ್ದರೆ ಮಾತ್ರ ಉಳಿದ ಎರಡು ಸಿದ್ಧಿಸುತ್ತವೆ. ಜೀವನದಲ್ಲಿ ತಪ್ಪು ಮಾಡದೇ ಧರ್ಮದ ಬೆಳಕಲ್ಲಿ ಜೀವನ ಮಾಡಬೇಕು ಎಂದು ಸಲಹೆ ಮಾಡಿದರು. ಸೇವೆ ಎನ್ನುವುದು ಧರ್ಮಸಂಗ್ರಹಕ್ಕೆ ಅವಕಾಶ. ಪೀಠದ ಸೇವೆ ಜನ್ಮ ಜನ್ಮಾಂತರದಲ್ಲಿ ನಿಮ್ಮನ್ನು ಕಾಪಾಡುತ್ತವೆ. ಪುಣ್ಯಸಂಗ್ರಹಕ್ಕೆ ಇಂಥ ಜವಾಬ್ದಾರಿಗಳು ಒಳ್ಳೆಯ ಮಾರ್ಗ. ಸಿಕ್ಕಿದ ಸೇವಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಧನ್ಯತೆ ಪಡೆಯಬೇಕು ಎಂದು ಸೂಚಿಸಿದರು.

ವರ್ಷಕಾಲದಲ್ಲಿ ಗುರುದರ್ಶನಾರ್ಥವಾಗಿ, ರಾಮನ ದರ್ಶನಕ್ಕಾಗಿ ಆಗಮಿಸಿದ ಸಮಸ್ತ ಶಿಷ್ಯರ ಮೇಲೆ ಅನುಗ್ರಹದ ಮಳೆ ಸುರಿಯಲಿ ಎಂದು ಹರಸಿದರು. ಗೋಮಾತೆಯ ಸೇವೆ ಸಮಾಜದ ಪ್ರತಿಯೊಬ್ಬ ಶಿಷ್ಯರ ಕರ್ತವ್ಯ. ಗೋಸ್ವರ್ಗವನ್ನು ಬೆಳೆಸುವುದು ಸಿದ್ದಾಪುರ ಮಂಡಲದ ಸಮಸ್ತ ಶಿಷ್ಯರ ಕರ್ತವ್ಯ ಎಂದರು. ಈ ಬಾರಿಯ ನವರಾತ್ರಿ ಉತ್ಸವ ಸಾಗರದಲ್ಲಿ ನಡೆಯಲಿದ್ದು, ಸಿದ್ದಾಪುರ ಮಂಡಲದ ಜನತೆ ಈ ಪುಣ್ಯಕಾರ್ಯದಲ್ಲಿ ಪಾಲ್ಗೊಂಡು ಆತ್ಮೈಶ್ವರ್ಯ ಪಡೆದುಕೊಳ್ಳಲು ಅವಕಾಶ ಒದಗಿಬಂದಿದೆ ಎಂದು ಹೇಳಿದರು.

ಪುಣ್ಯನಿಧಿ ಸಂಪಾದನೆಗೆ ಅನುಷ್ಠಾನದ ಮಾರ್ಗವನ್ನು ಪ್ರತಿಯೊಬ್ಬರೂ ಅನುಸರಿಸಬೇಕು. ಧರ್ಮಧನವನ್ನು ಅಂತರಂಗದಲ್ಲಿ ಕೂಡಿಟ್ಟುಕೊಳ್ಳಬೇಕು. ಚಾತುರ್ಮಾಸ್ಯ ಇದಕ್ಕೆ ಹೇಳಿ ಮಾಡಿಸಿದ ಸಮಯ. ಸನಾತನ ಸಂಸ್ಕೃತಿಯ ಹಿನ್ನೆಲೆ ಇರುವ, ಶಂಕರಾಚಾರ್ಯರಿಂದ ಸ್ಥಾಪಿತವಾದ ಅವಿಚ್ಛಿನ್ನ ಪರಂಪರೆಯ ಪೀಠದ ಶಿಷ್ಯರಾಗಿ ನಮಗೆ ದೊಡ್ಡ ಹೊಣೆಗಾರಿಕೆ ಇದೆ ಎಂದು ಕಿವಿಮಾತು ಹೇಳಿದರು.

ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಚಾತುರ್ಮಾಸ್ಯ ತಂಡದ ಪ್ರಧಾನ ಸಂಯೋಜಕ ಮಂಜುನಾಥ ಸುವರ್ಣಗದ್ದೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ಮುಖ್ಯ ಅಭಿಯಂತರ ವಿಷ್ಣು ಬನಾರಿ ಮತ್ತಿತರರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ಅಂಗವಾಗಿ ವೇದಮೂರ್ತಿ ಉಂಚಗೇರಿ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಾಮವೇದ ಪಾರಾಯಣ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago