Advertisement
ಧಾರ್ಮಿಕ

ತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ

Share
ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” ಎಂದರು.
ಬೆಳಿಗ್ಗೆ ಕಾಳು ಬಿತ್ತಿ ಸಂಜೆಗೆ ಪೈರು ಬರಲು ಸಾಧ್ಯವೇ? ಹೀಗೆ ಜೀವನದಲ್ಲೂ ತಾಳ್ಮೆ ಅತ್ಯಂತ ಮಹತ್ವ. ಜೀವನದಲ್ಲೂ ನಾವು ಅವಸರ ಮಾಡುತ್ತೇವೆ. ಇದು ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಮಂಕು ತಿಮ್ಮನ ಕಗ್ಗವನ್ನು ಉದಾಹರಿಸಿದರು. ಜೀವನದಲ್ಲಿ ಕಾಲಕ್ಕೆ ಅತ್ಯಂತ ಮಹತ್ವ ಇದೆ. ಸೂಕ್ತ ಕಾಲಕ್ಕೆ ಕಾಯುವ ತಾಳ್ಮೆ ನಮಗೆ ಬೇಕು. ವೇಳೆಯ ಗಡುವು ಮರೆತರೆ ಹದ ತಪ್ಪುತ್ತದೆ. ತಾಳುಮೆಯೇ ಪರಿಪಾಕ ಎಂದು ಡಿವಿಜಿಯವರು ಕಗ್ಗದಲ್ಲಿ ಬಣ್ಣಿಸಿದ್ದಾರೆ ಎಂದು ವಿವರಿಸಿದರು.
ಒಬ್ಬ ವ್ಯಕ್ತಿಯ ಬಗ್ಗೆ ತೀರ್ಮಾನಕ್ಕೆ ಬರುವ ಮುನ್ನ ಸಾಕಷ್ಟು ಯೋಚಿಸಬೇಕು. ಯಾವ ವಿಷಯದ ಬಗ್ಗೆಯೂ ತೀರ್ಮಾನಕ್ಕೆ ಬರುವಾಗ ಅವಸರ ಮಾಡದೇ, ಹತ್ತು ಬಾರಿ ಪರಾಮರ್ಶೆ ಮಾಡಬೇಕು ಎಂದು ಸುಂದರ ಕಥೆಯೊಂದರ ಮೂಲಕ ನಿರೂಪಿಸಿದರು. ಎಷ್ಟೋ ಬಾರಿ ನಮ್ಮ ಜೀವನದಲ್ಲಿ ಕಲಹ, ಯುದ್ಧಗಳಿಗೆ  ತಪ್ಪುಗ್ರಹಿಕೆ ಕಾರಣವಾಗುತ್ತದೆ. ಸ್ವಲ್ಪ ತಾಳ್ಮೆ, ಸಮಾಧಾನ ಬೇಕು. ಎಲ್ಲ ದೃಷ್ಟಿಕೋನಗಳಿಂದ ಯೋಚನೆ ಮಾಡಬೇಕು. ಪರಾಮರ್ಶೆ ಮಾಡದಿದ್ದಾಗ ನಾವು ಬಹಳಷ್ಟನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದರು.
ಶನಿವಾರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಚ್.ಸಿ.ಆಕಾಶ್ ಹಾಗೂ ಆದಿತ್ಯ ಎಚ್.ಸಿ. ಗಮಕ ವಾಚನ ನಡೆಸಿಕೊಟ್ಟರು. ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮತಾರಕ ಹವನ, ರುದ್ರಹೋಮ, ಆಂಜನೇಯನ ಪ್ರೀತ್ಯರ್ಥವಾಗಿ ತ್ರಿಮಧುರಯುಕ್ತ ಬಾಳೆಹಣ್ಣಿನ ಹವನವನ್ನು ನೆರವೇರಿಸಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago