Advertisement
ಧಾರ್ಮಿಕ

ತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ

Share
ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” ಎಂದರು.
ಬೆಳಿಗ್ಗೆ ಕಾಳು ಬಿತ್ತಿ ಸಂಜೆಗೆ ಪೈರು ಬರಲು ಸಾಧ್ಯವೇ? ಹೀಗೆ ಜೀವನದಲ್ಲೂ ತಾಳ್ಮೆ ಅತ್ಯಂತ ಮಹತ್ವ. ಜೀವನದಲ್ಲೂ ನಾವು ಅವಸರ ಮಾಡುತ್ತೇವೆ. ಇದು ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಮಂಕು ತಿಮ್ಮನ ಕಗ್ಗವನ್ನು ಉದಾಹರಿಸಿದರು. ಜೀವನದಲ್ಲಿ ಕಾಲಕ್ಕೆ ಅತ್ಯಂತ ಮಹತ್ವ ಇದೆ. ಸೂಕ್ತ ಕಾಲಕ್ಕೆ ಕಾಯುವ ತಾಳ್ಮೆ ನಮಗೆ ಬೇಕು. ವೇಳೆಯ ಗಡುವು ಮರೆತರೆ ಹದ ತಪ್ಪುತ್ತದೆ. ತಾಳುಮೆಯೇ ಪರಿಪಾಕ ಎಂದು ಡಿವಿಜಿಯವರು ಕಗ್ಗದಲ್ಲಿ ಬಣ್ಣಿಸಿದ್ದಾರೆ ಎಂದು ವಿವರಿಸಿದರು.
ಒಬ್ಬ ವ್ಯಕ್ತಿಯ ಬಗ್ಗೆ ತೀರ್ಮಾನಕ್ಕೆ ಬರುವ ಮುನ್ನ ಸಾಕಷ್ಟು ಯೋಚಿಸಬೇಕು. ಯಾವ ವಿಷಯದ ಬಗ್ಗೆಯೂ ತೀರ್ಮಾನಕ್ಕೆ ಬರುವಾಗ ಅವಸರ ಮಾಡದೇ, ಹತ್ತು ಬಾರಿ ಪರಾಮರ್ಶೆ ಮಾಡಬೇಕು ಎಂದು ಸುಂದರ ಕಥೆಯೊಂದರ ಮೂಲಕ ನಿರೂಪಿಸಿದರು. ಎಷ್ಟೋ ಬಾರಿ ನಮ್ಮ ಜೀವನದಲ್ಲಿ ಕಲಹ, ಯುದ್ಧಗಳಿಗೆ  ತಪ್ಪುಗ್ರಹಿಕೆ ಕಾರಣವಾಗುತ್ತದೆ. ಸ್ವಲ್ಪ ತಾಳ್ಮೆ, ಸಮಾಧಾನ ಬೇಕು. ಎಲ್ಲ ದೃಷ್ಟಿಕೋನಗಳಿಂದ ಯೋಚನೆ ಮಾಡಬೇಕು. ಪರಾಮರ್ಶೆ ಮಾಡದಿದ್ದಾಗ ನಾವು ಬಹಳಷ್ಟನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದರು.
ಶನಿವಾರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಚ್.ಸಿ.ಆಕಾಶ್ ಹಾಗೂ ಆದಿತ್ಯ ಎಚ್.ಸಿ. ಗಮಕ ವಾಚನ ನಡೆಸಿಕೊಟ್ಟರು. ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮತಾರಕ ಹವನ, ರುದ್ರಹೋಮ, ಆಂಜನೇಯನ ಪ್ರೀತ್ಯರ್ಥವಾಗಿ ತ್ರಿಮಧುರಯುಕ್ತ ಬಾಳೆಹಣ್ಣಿನ ಹವನವನ್ನು ನೆರವೇರಿಸಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago