ಸುದ್ದಿಗಳು

ಒಳಿತು ಒಳಿತನ್ನೇ ಆಕರ್ಷಿಸುತ್ತದೆ – ರಾಘವೇಶ್ವರ ಶ್ರೀ

Share

ಒಳಿತು ಒಳಿತನ್ನು ಆಕರ್ಷಿಸುತ್ತದೆ. ಕೆಡುಕು, ಕೆಡುಕನ್ನು ಆಕರ್ಷಿಸುತ್ತದೆ. ಒಂದು ಒಳ್ಳೆಯ ಕೆಲಸ ಮಾಡಿದವನು ಹೆಚ್ಚು ಹೆಚ್ಚು ಒಳ್ಳೆಯ ಕೆಲಸದಲ್ಲಿ ನಿರತನಾಗುತ್ತಾನೆ. ಅಂತೆಯೇ ಒಂದು ಕೆಟ್ಟ ಕೆಲಸ ಮಾಡಿದವನು ಅದೇ ಪರಂಪರೆ ಮುಂದುವರಿಸುತ್ತಾನೆ ಎಂದು ಶ್ರೀರಾಘವೇಶ್ವರಭಾರತೀಸ್ವಾಮೀಜಿ ನುಡಿದರು.

Advertisement

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ ಮಾಲಿಕೆಯ ಐದನೇ ದಿನದ ಪ್ರವಚನವನ್ನು ಶ್ರೀಗಳು ಅನುಗ್ರಹಿಸಿದರು.

ಹರಿ-ಹರ ಶಕ್ತಿಗಳ ರೂಪದಿಂದ ಮನ್ಮಥ ಜನಿಸಿದರೆ, ಶಿವನ ಕ್ರೋಧಾಗ್ನಿಯಿಂದ ಭಸ್ಮವಾದ ಮನ್ಮಥನ ಚಿತಾಭಸ್ಮದಿಂದ ಬಂಡಾಸುರನ ಜನನವಾಗುತ್ತದೆ. ಬಂಡಾಸುರ ಜನಿಸಿದ್ದು ಶಿವನ ದೃಷ್ಟಿಯಿಂದ. ಆತ ಮನ್ಮಥ ರೂಪ ಹೊಂದಿದ್ದರೂ, ಗುಣಸ್ವಭಾವ ಮಾತ್ರ ದೈತ್ಯರದ್ದಾಯಿತು ಎಂದು ವಿಶ್ಲೇಷಿಸಿದರು.

ಪ್ರಕೃತಿ, ಮೋಹಿನಿಯ ಬಳಿಕ ಲಲಿತಾ ಪರಮೇಶ್ವರಿ, ರಾಜರಾಜೇಶ್ವರಿ, ತ್ರಿಪುರಸುಂದರಿಯ ರೂಪದಲ್ಲಿ ಆದಿಶಕ್ತಿ ಪ್ರಕಟವಾಗುತ್ತಾಳೆ. ಯಾವುದೇ ದೊಡ್ಡ ಕೆಡುಕು ಸಂಭವಿಸಿದಾಗ ಅದು ಮುಂದೆ ದೊಡ್ಡ ಒಳಿತಾಗುತ್ತದೆ ಎನ್ನುವುದರ ಸೂಚನೆ. ಬಂಡಾಸುರನ ಉಪಟಳವು ಮುಂದೆ ಲಲಿತಾ ಪರಮೇಶ್ವರಿಯ ಆವೀರ್ಭಾವಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.

ಈಶ್ವರನ ಮೂರನೇ ಕಣ್ಣಿನ ಕ್ರೋಧಾಗ್ನಿಗೆ ಕಾಮದಹನವಾಗುತ್ತದೆ. ಚಿತ್ರಕರ್ಮನೆಂಬ ಗಣಮುಖ್ಯನು ಕಾಮನ ಬೂದಿಯಲ್ಲಿ ಅಸಾಮಾನ್ಯ ಪುರುಷಾಕೃತಿಯ ಬೊಂಬೆಯನ್ನು ನಿರ್ಮಿಸುತ್ತಾನೆ. ಇದರ ಮೇಲೆ ಶಿವನ ದೃಷ್ಟಿ ಬೀಳುತ್ತದೆ. ಆಗ ಆ ಮನ್ಮಥನ ರೂಪದಲ್ಲಿರುವ ಆಕೃತಿಗೆ ಜೀವ ಬರುತ್ತದೆ. ಆದರೆ ಗುಣ ಮಾತ್ರ ಭಿನ್ನ. ಕ್ರೋಧಭಸ್ಮದಿಂದ ಹುಟ್ಟಿದ ಆತನಿಗೆ ಶ್ರೇಯಸ್ಸಿನ ಮಾರ್ಗವನ್ನು ಬೋಧಿಸುತ್ತಾನೆ. ರುದ್ರಬೋಧನೆ ಮಾಡುತ್ತಾನೆ. ಶಿವಸೇವೆಗೆ ನಿಯೋಜಿಸುತ್ತಾನೆ ಸಂತುಷ್ಟನಾದ ಶಿವ, ಬಾಲಕನಿಗೆ ವರ ನೀಡುತ್ತಾನೆ. ಎದುರು ಹೋರಾಡುವವನ ಅರ್ಧ ಬಲ ತನಗೆ ಬರಬೇಕು, ಅಸ್ತ್ರಶಸ್ತ್ರಗಳಿಂದ ಯಾವ ಕೆಡುಕೂ ಆಗಬಾರದು ಎಂಬ ವರ ಪಡೆಯುತ್ತಾನೆ. 60 ಸಾವಿರ ವರ್ಷ ರಾಜ್ಯವಾಳುವಂತೆ ಅನುಗ್ರಹಿಸುತ್ತಾನೆ ಹೇಳಿದರು.

Advertisement

ಬ್ರಹ್ಮನಿಂದ ಭಂಡಾಸುರ ಎಂದು ಕರೆಸಿಕೊಂಡ ಈತನ ನಿರ್ಲಜ್ಜನಾಗಿ ಬೆಳೆಯುತ್ತಾನೆ. ಕಾಮ ಕ್ರೋಧಗಳ ಸಂಗಮವಾಗಿ, ದಾನವಾಗಿ, ದೈತ್ಯನಾಗಿ ಬೆಳೆಯುತ್ತಾನೆ. ಈತ ಬೆಳೆಯುತ್ತಿದ್ದಂತೆ ಎಲ್ಲ ರಾಕ್ಷಸರು ಈತನತ್ತ ಶುಕ್ರಾಚಾರ್ಯರ ನೇತೃತ್ವದಲ್ಲಿ ಆಕರ್ಷಿತರಾಗುತ್ತಾರೆ. ಶೋಣಿತಾಪುರ ಎಂಬ ರಕ್ತದ ಊರಿನಲ್ಲಿ ವಾಸಿಸುತ್ತಾನೆ. ಅಕ್ಷಯ ಸಿಂಹಾಸನ, ಅಮೂಲ್ಯ ಕಿರೀಟ, ವಿಶೇಷ ಛತ್ರ, ವಿಜಯ ಧನಸ್ಸಿನಂಥ ವಿಶೇಷ ಸಾಧನಗಳನ್ನು ಶುಕ್ರಾಚಾರ್ಯರು ಆತನಿಗೆ ಕರುಣಿಸುತ್ತಾರೆ. ಇಂದ್ರಾದಿ ದೇವತೆಗಳು ಆತನ ಆಳುಗಳಾಗುತ್ತಾರೆ ಎಂದು ವಿವರಿಸಿದರು.
ಆದರೆ ಬಂಡಾಸುರನ ಗುರುನಿಷ್ಠೆ ಅಪಾರ. ಯಜ್ಞ-ಯಾಗಾದಿಗಳು ಅಸುರರ ಮನೆಯಲ್ಲೂ ನಡೆಯುತ್ತಿದ್ದವು. ಇದರಿಂದಾಗಿ ಈತನನ್ನು ಯಾರೂ ಎದುರಿಸಲಾಗದಷ್ಟು ಬಲಿಷ್ಠನಾಗಿ 60 ಸಾವಿರ ವರ್ಷ ಕಾಲ ಆಳ್ವಿಕೆ ನಡೆಸಿದ. ಇಂದ್ರಾದಿ ದೇವತೆಗಳು ಕ್ಷೀಣವಾಗುತ್ತಾ ಬಂದರು.

ಕೆಡುಕನ್ನು ಕೆಡಿಸುವ ಉದ್ದೇಶದಿಂದ ಅವರ ಬಲವನ್ನು ಕುಂದಿಸಲು ಚಿತಗ್ನಿಯಲ್ಲಿ ರಾಜರಾಜೇಶ್ವರಿಯ ಆವೀರ್ಭಾವವಾಗುತ್ತದೆ ಎಂದು ಕಥಾಭಾಗವನ್ನು ಮಂಗಲಗೊಳಿಸಿದರು.

ಉಂಡೆಮನೆ ವಿಶ್ವೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಮಠ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್, ಗಣೇಶ್ ಭಟ್ ಮೈಕೆ, ಹವ್ಯಕ ಮಹಾಮಂಡಲ ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಮಿತ್ತೂರು, ಪ್ರಾಂತ ಕಾರ್ಯದರ್ಶಿ ವೇಣುಗೋಪಾಲ್ ಕೆದ್ಲ, ವಿದ್ಯಾರ್ಥಿ ಪ್ರಧಾನರಾದ ಈಶ್ವರ ಪ್ರಸಾದ್ ಕನ್ಯಾನ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಾತೃವಿಭಾಗದ ಪ್ರಮುಖರಾದ ವೀಣಾ ಗೋಪಾಲಕೃಷ್ಣ ಪುಳು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ, ಕಾರ್ಯದರ್ಶಿ ಮಹೇಶ್ ಕುದುಪುಲ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

3 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

3 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

18 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

18 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

19 hours ago