Advertisement
ಸುದ್ದಿಗಳು

ತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ

Share
ಮನು ಸ್ಮೃತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ ಸಹಿಸುವ ಶಕ್ತಿ ಸಹನೆಯಿಂದ ಬರುತ್ತದೆ. ಸಹನೆ ತಪ್ಪಿದರೆ ಕೈಗೆ ಬಂದ ಭಾಗ್ಯವೂ ದಕ್ಕುವುದಿಲ್ಲ” ಎಂದು ವಿಶ್ಲೇಷಿಸಿದರು.
ಸಹನೆ ಕಳೆದುಕೊಂಡರೆ ನಮ್ಮ ಅರ್ಹ ಅಭ್ಯುದಯ ಕೈ ತಪ್ಪುತ್ತದೆ ಮಾತ್ರವಲ್ಲದೇ ಇದು ಅನಾಹುತಕ್ಕೂ ದಾರಿಯಾಗುತ್ತದೆ. ಸಹನೆ ತಪ್ಪಿದಲ್ಲಿ ದುಡುಕಿನಿಂದ ಅವಿವೇಕ ಉಂಟಾಗುತ್ತದೆ. ಇದು ಎಲ್ಲ ಆಪತ್ತುಗಳಿಗೆ ಕಾರಣವಾಗುತ್ತದೆ. ಆದ್ದರಿಂದಲೇ ತಾಳಿದವನು ಬಾಳಿಯಾನು ಎಂಬ ನಾಣ್ನುಡಿ ಹುಟ್ಟಿಕೊಂಡಿದೆ. ಮಾತನಾಡುವ ಮೊದಲು, ಹೆಜ್ಜೆ ಇಡುವ ಮೊದಲು ಸಮಾಧಾನ, ಸಮಾಲೋಚನೆ ಇದ್ದರೆ ಬದುಕು ಶ್ರೇಷ್ಠವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಸಂಪೆಕಟ್ಟೆ ಮಂಡಲದ ಶಿಷ್ಯಭಕ್ತರ ವತಿಯಿಂದ ಶುಕ್ರವಾರ ಶ್ರೀಗುರುಭಿಕ್ಷೆ ನೆರವೇರಿತು. ಚಾತುರ್ಮಾಸ್ಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಕ್ರವಾರ ನವಚಂಡೀಯಾಗ ನಡೆಯಿತು.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

18 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago