Advertisement
ಸುದ್ದಿಗಳು

ತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ

Share
ಮನು ಸ್ಮೃತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ ಸಹಿಸುವ ಶಕ್ತಿ ಸಹನೆಯಿಂದ ಬರುತ್ತದೆ. ಸಹನೆ ತಪ್ಪಿದರೆ ಕೈಗೆ ಬಂದ ಭಾಗ್ಯವೂ ದಕ್ಕುವುದಿಲ್ಲ” ಎಂದು ವಿಶ್ಲೇಷಿಸಿದರು.
ಸಹನೆ ಕಳೆದುಕೊಂಡರೆ ನಮ್ಮ ಅರ್ಹ ಅಭ್ಯುದಯ ಕೈ ತಪ್ಪುತ್ತದೆ ಮಾತ್ರವಲ್ಲದೇ ಇದು ಅನಾಹುತಕ್ಕೂ ದಾರಿಯಾಗುತ್ತದೆ. ಸಹನೆ ತಪ್ಪಿದಲ್ಲಿ ದುಡುಕಿನಿಂದ ಅವಿವೇಕ ಉಂಟಾಗುತ್ತದೆ. ಇದು ಎಲ್ಲ ಆಪತ್ತುಗಳಿಗೆ ಕಾರಣವಾಗುತ್ತದೆ. ಆದ್ದರಿಂದಲೇ ತಾಳಿದವನು ಬಾಳಿಯಾನು ಎಂಬ ನಾಣ್ನುಡಿ ಹುಟ್ಟಿಕೊಂಡಿದೆ. ಮಾತನಾಡುವ ಮೊದಲು, ಹೆಜ್ಜೆ ಇಡುವ ಮೊದಲು ಸಮಾಧಾನ, ಸಮಾಲೋಚನೆ ಇದ್ದರೆ ಬದುಕು ಶ್ರೇಷ್ಠವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಸಂಪೆಕಟ್ಟೆ ಮಂಡಲದ ಶಿಷ್ಯಭಕ್ತರ ವತಿಯಿಂದ ಶುಕ್ರವಾರ ಶ್ರೀಗುರುಭಿಕ್ಷೆ ನೆರವೇರಿತು. ಚಾತುರ್ಮಾಸ್ಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಕ್ರವಾರ ನವಚಂಡೀಯಾಗ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

4 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

18 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

18 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

19 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago