Advertisement
ಸುದ್ದಿಗಳು

ತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ

Share
ಮನು ಸ್ಮೃತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ ಸಹಿಸುವ ಶಕ್ತಿ ಸಹನೆಯಿಂದ ಬರುತ್ತದೆ. ಸಹನೆ ತಪ್ಪಿದರೆ ಕೈಗೆ ಬಂದ ಭಾಗ್ಯವೂ ದಕ್ಕುವುದಿಲ್ಲ” ಎಂದು ವಿಶ್ಲೇಷಿಸಿದರು.
ಸಹನೆ ಕಳೆದುಕೊಂಡರೆ ನಮ್ಮ ಅರ್ಹ ಅಭ್ಯುದಯ ಕೈ ತಪ್ಪುತ್ತದೆ ಮಾತ್ರವಲ್ಲದೇ ಇದು ಅನಾಹುತಕ್ಕೂ ದಾರಿಯಾಗುತ್ತದೆ. ಸಹನೆ ತಪ್ಪಿದಲ್ಲಿ ದುಡುಕಿನಿಂದ ಅವಿವೇಕ ಉಂಟಾಗುತ್ತದೆ. ಇದು ಎಲ್ಲ ಆಪತ್ತುಗಳಿಗೆ ಕಾರಣವಾಗುತ್ತದೆ. ಆದ್ದರಿಂದಲೇ ತಾಳಿದವನು ಬಾಳಿಯಾನು ಎಂಬ ನಾಣ್ನುಡಿ ಹುಟ್ಟಿಕೊಂಡಿದೆ. ಮಾತನಾಡುವ ಮೊದಲು, ಹೆಜ್ಜೆ ಇಡುವ ಮೊದಲು ಸಮಾಧಾನ, ಸಮಾಲೋಚನೆ ಇದ್ದರೆ ಬದುಕು ಶ್ರೇಷ್ಠವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಸಂಪೆಕಟ್ಟೆ ಮಂಡಲದ ಶಿಷ್ಯಭಕ್ತರ ವತಿಯಿಂದ ಶುಕ್ರವಾರ ಶ್ರೀಗುರುಭಿಕ್ಷೆ ನೆರವೇರಿತು. ಚಾತುರ್ಮಾಸ್ಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಕ್ರವಾರ ನವಚಂಡೀಯಾಗ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

3 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

5 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

5 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago