Advertisement
ಸುದ್ದಿಗಳು

ತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ

Share
ಮನು ಸ್ಮೃತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ ಸಹಿಸುವ ಶಕ್ತಿ ಸಹನೆಯಿಂದ ಬರುತ್ತದೆ. ಸಹನೆ ತಪ್ಪಿದರೆ ಕೈಗೆ ಬಂದ ಭಾಗ್ಯವೂ ದಕ್ಕುವುದಿಲ್ಲ” ಎಂದು ವಿಶ್ಲೇಷಿಸಿದರು.
ಸಹನೆ ಕಳೆದುಕೊಂಡರೆ ನಮ್ಮ ಅರ್ಹ ಅಭ್ಯುದಯ ಕೈ ತಪ್ಪುತ್ತದೆ ಮಾತ್ರವಲ್ಲದೇ ಇದು ಅನಾಹುತಕ್ಕೂ ದಾರಿಯಾಗುತ್ತದೆ. ಸಹನೆ ತಪ್ಪಿದಲ್ಲಿ ದುಡುಕಿನಿಂದ ಅವಿವೇಕ ಉಂಟಾಗುತ್ತದೆ. ಇದು ಎಲ್ಲ ಆಪತ್ತುಗಳಿಗೆ ಕಾರಣವಾಗುತ್ತದೆ. ಆದ್ದರಿಂದಲೇ ತಾಳಿದವನು ಬಾಳಿಯಾನು ಎಂಬ ನಾಣ್ನುಡಿ ಹುಟ್ಟಿಕೊಂಡಿದೆ. ಮಾತನಾಡುವ ಮೊದಲು, ಹೆಜ್ಜೆ ಇಡುವ ಮೊದಲು ಸಮಾಧಾನ, ಸಮಾಲೋಚನೆ ಇದ್ದರೆ ಬದುಕು ಶ್ರೇಷ್ಠವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಸಂಪೆಕಟ್ಟೆ ಮಂಡಲದ ಶಿಷ್ಯಭಕ್ತರ ವತಿಯಿಂದ ಶುಕ್ರವಾರ ಶ್ರೀಗುರುಭಿಕ್ಷೆ ನೆರವೇರಿತು. ಚಾತುರ್ಮಾಸ್ಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಕ್ರವಾರ ನವಚಂಡೀಯಾಗ ನಡೆಯಿತು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

3 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

11 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

11 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

13 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

20 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

21 hours ago