Advertisement
MIRROR FOCUS

ವಯನಾಡ್‌ ಕ್ಷೇತ್ರ ಬಿಟ್ಟುಕೊಟ್ಟ ರಾಹುಲ್‌ ಗಾಂಧಿ | ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ | ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಸಾಧ್ಯತೆ |

Share

ಲೋಕಸಭೆ ಚುನಾವಣೆ(Lok sabha Election) ಮುಗಿದರು ಇನ್ನು ಹವಾ ನಿಂತಿಲ್ಲ. ಇದೀಗ ಕಾಂಗ್ರೆಸ್‌(Congress) ನಾಯಕ ರಾಹುಲ್‌ ಗಾಂಧಿ(Rahul Gandhi) ಎರಡು ಕ್ಷೇತ್ರದಲ್ಲಿ ಗೆದ್ದು ಬೀಗಿದ್ದರು. ಈಗ ಒಂದು ಕ್ಷೇತ್ರವನ್ನು ಆರಿಕೊಂಡ ಪರಿಣಾಮ ರಾಯ್‌ ಬರೇಲಿಯನ್ನು(Ray Bareli) ಇಟ್ಟುಕೊಂಡು ವಯನಾಡು ಅನ್ನು ಬಿಟ್ಟುಕೊಡಲು ನಿರ್ಧರಿಸಿದ್ದಾರೆ. ಅವರು ರಾಯ್ ಬರೇಲಿಯ ಸಂಸದರಾಗಿ ಉಳಿಯಲಿದ್ದಾರೆ. ವಯನಾಡ್‌ನಿಂದ ಉಪಚುನಾವಣೆಯಲ್ಲಿ (Wayanad Lok Sabha Election) ಪ್ರಿಯಾಂಕಾ ಗಾಂಧಿ (Priyanka Gandhi) ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಇದರೊಂದಿಗೆ ಗಾಂಧಿ ಕುಟುಂಬದ ಮತ್ತೊಬ್ಬರು ದಕ್ಷಿಣದಿಂದ ಚುನಾವಣಾ ರಾಜಕೀಯಕ್ಕೆ ಬರಲಿದ್ದಾರೆ.

ಗಾಂಧಿ ಕುಟುಂಬವು ದಕ್ಷಿಣ ಭಾರತದೊಂದಿಗೆ ಹಳೆಯ ಸಂಬಂಧವನ್ನು ಹೊಂದಿದೆ. ಇಂದಿರಾ ಗಾಂಧಿಯವರು 1978ರ ಉಪಚುನಾವಣೆಯಲ್ಲಿ ಕರ್ನಾಟಕದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಪ್ರಧಾನಿಯಾಗಿದ್ದರು. ಇದಾದ ನಂತರ ಇಂದಿರಾ ಗಾಂಧಿ ಅವರು 1980ರಲ್ಲಿ ಆಂಧ್ರದ ಮೇದಕ್ ಲೋಕಸಭಾ ಕ್ಷೇತ್ರದಿಂದ ಗೆದ್ದಿದರು. 1999ರಲ್ಲಿ ಸೋನಿಯಾ ಗಾಂಧಿ ಅವರು ಕೂಡ ದಕ್ಷಿಣ ಭಾರತದಿಂದ ರಾಜಕೀಯ ಜೀವನ ಆರಂಭಿಸಿದರು. ಅವರು 1999ರಲ್ಲಿ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಿದ್ದರು ಮತ್ತು ಎರಡೂ ಸ್ಥಾನಗಳನ್ನು ಗೆದ್ದಿದ್ದರು. ಆದರೆ, ಬಳಿಕ ಅವರು ಬಳ್ಳಾರಿ ಸೀಟು ತೊರೆದಿದ್ದರು.

1999ರಲ್ಲಿ ಸೋನಿಯಾ ಗಾಂಧಿ ವಿರುದ್ಧ ಸುಷ್ಮಾ ಸ್ವರಾಜ್‌ ಸ್ಪರ್ಧೆ! : ಬಿಜೆಪಿ ಟಿಕೆಟ್‌ ನೀಡುವ ವಿಚಾರದಲ್ಲಿ ಹಿಂದಿನಿಂದಲೂ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿತ್ತು. 1999ರಲ್ಲಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಕಣಕ್ಕಿಳಿಯುವ ಸುದ್ದಿ ಬಹಿರಂಗವಾದಾಗ ಬಿಜೆಪಿ ಈ ಕ್ಷೇತ್ರದಿಂದ ಸುಷ್ಮಾ ಸ್ವರಾಜ್‌ಗೆ ಟಿಕೆಟ್ ನೀಡುವ ಮೂಲಕ ಚುನಾವಣಾ ಸ್ಪರ್ಧೆಯನ್ನು ಕುತೂಹಲಕರಗೊಳಿಸಿತ್ತು. ಈ ಸೀಟಿನಲ್ಲಿ ಸೋನಿಯಾ ಗಾಂಧಿಗೆ ಸುಷ್ಮಾ ತೀವ್ರ ಪೈಪೋಟಿ ನೀಡಿದ್ದರು. ಆದರೆ, ಈ ಚುನಾವಣೆಯಲ್ಲಿ ಸೋತರು. ಸೋನಿಯಾ ಗಾಂಧಿ 414000 ಮತಗಳನ್ನು ಪಡೆದರು. ಆದರೆ ಸುಷ್ಮಾ ಸ್ವರಾಜ್ ಅವರು ಮೂರೂವರೆ ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಸೋನಿಯಾ ಗಾಂಧಿ ಅವರು ಈ ಚುನಾವಣೆಯಲ್ಲಿ ಸುಮಾರು 56000 ಮತಗಳ ಅಂತರದಿಂದ ಗೆದ್ದು ಲೋಕಸಭೆ ಪ್ರವೇಶಿಸಿದ್ದರು.

ಸದ್ಯ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವುಗೊಂಡಿರುವ ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುತೂಹಲ ಕೆರಳಿಸಿದ್ದು, ಪ್ರಿಯಾಂಕ ಗಾಂಧಿಯನ್ನು ಈಗಾಗಲೇ ಕಾಂಗ್ರೆಸ್‌ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಬಿಜೆಪಿ ಸ್ಮೃತಿ ಇರಾನಿಯನ್ನು ಕಣಕ್ಕಿಳಿಸಿ ಸ್ಪರ್ಧೆಯನ್ನು ರೋಚಕಗೊಳಿಸುತ್ತಾ ಅಥವಾ ತ್ರಿಶ್ಯೂರ್‌ನಲ್ಲಿ ಸೋತಿರುವ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಣಂತೆ ಬೇರೆ ಅಭ್ಯರ್ಥಿಯನ್ನು ಹಾಕುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

18 minutes ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

2 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

3 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

15 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

17 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

23 hours ago