#RahulGandhi | ಮರಳಿ ಸಂಸತ್ ಕಲಾಪಕ್ಕೆ ರಾಹುಲ್ ಗಾಂಧಿ | ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್‌

August 7, 2023
12:24 PM
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್‌ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ವಾಪಸ್‌ ಪಡೆದಿದ್ದಾರೆ. ಈ ಮೂಲಕ ರಾಹುಲ್‌ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.

ಮೋದಿ ಉಪನಾಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದ ಸಂಸದ ರಾಹುಲ್‌ ಗಾಂಧಿ  ಸಂಸದೀಯ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್‌ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ವಾಪಸ್‌ ಪಡೆದಿದ್ದಾರೆ. ಈ ಮೂಲಕ ರಾಹುಲ್‌ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್‌ ಈ ನಿರ್ಧಾರ ಕೈಗೊಂಡಿದ್ದಾರೆ.

ಮಾನನಷ್ಟ ಪ್ರಕರಣದಲ್ಲಿ ಸೂರತ್ ಜಿಲ್ಲಾ ನ್ಯಾಯಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬಳಿಕ ಜನಪ್ರತಿನಿಧಿ ಕಾಯ್ದೆಯಡಿ ಕಳೆದ ಮಾರ್ಚ್ ನಲ್ಲಿ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿತ್ತು. ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್‌ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ. ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.

Source : Online media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror