ಸುದ್ದಿಗಳು

2005ರಿಂದ ವಾಸವಿದ್ದ ಸರ್ಕಾರಿ ಬಂಗಲೆ ತೊರೆದ ರಾಹುಲ್ ಗಾಂಧಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಳಗ್ಗೆಯಿಂದ 2 ಬಾರಿ ಬಂಗಲೆಗೆ ಭೇಟಿ ನೀಡಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ರಾಹುಲ್ ಗಾಂಧಿ ಕೀಗಳನ್ನು ಹಸ್ತಾಂತರಿಸಿದ್ದಾರೆ.

Advertisement

2005 ರಿಂದ ರಾಹುಲ್ ಗಾಂಧಿ 12 ತುಘಲಕ್ ಲೇನ್ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಂಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಸಿ.ಆರ್. ಪಾಟೀಲ್ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು ಏಪ್ರಿಲ್ 22ರೊಳಗೆ ದೆಹಲಿಯಲ್ಲಿರುವ ತುಘಲಕ್ ಲೇನ್ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು. ಮನೆ ಖಾಲಿ ಮಾಡಲು ಒಪ್ಪಿಗೆ ಸೂಚನೆ ನೀಡುತ್ತಿದ್ದಂತೆ ರಾಹುಲ್ ಗಾಂಧಿಗೆ ಪಕ್ಷದ ನಾಯಕರಿಂದ ಮನೆ ಆಫರ್‌ಗಳು ಹರಿದು ಬಂದಿತ್ತು.

ಆದರೆ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಜನಪಥ್ ನಿವಾಸಕ್ಕೆ ತೆರಳುತ್ತಿದ್ದಾರೆ. ಆದರೂ ರಾಹುಲ್ ಗಾಂಧಿ ಅವರು ಕೆಲವು ನಿಯಮಗಳ ಪ್ರಕಾರ ಬಂಗಲೆಯಿಂದ ಹೊರಹೋಗಬೇಕಾಗಿದೆ. ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಾಜಕೀಯ ಸೇಡಿನ ಆರೋಪ ಮಾಡಿದ್ದಾರೆ.

ಕಳೆದ ವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಮನೆಯನ್ನು ಖಾಲಿಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತುಘಲಕ್ ಲೇನ್‍ನ ಬಂಗಲೆ ಹೊರಗೆ 2 ಟ್ರಕ್‍ಗಳಲ್ಲಿ ಕಾರ್ಮಿಕರು ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

6 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

14 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

15 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago