ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಳಗ್ಗೆಯಿಂದ 2 ಬಾರಿ ಬಂಗಲೆಗೆ ಭೇಟಿ ನೀಡಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ರಾಹುಲ್ ಗಾಂಧಿ ಕೀಗಳನ್ನು ಹಸ್ತಾಂತರಿಸಿದ್ದಾರೆ.
2005 ರಿಂದ ರಾಹುಲ್ ಗಾಂಧಿ 12 ತುಘಲಕ್ ಲೇನ್ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಂಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಸಿ.ಆರ್. ಪಾಟೀಲ್ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು ಏಪ್ರಿಲ್ 22ರೊಳಗೆ ದೆಹಲಿಯಲ್ಲಿರುವ ತುಘಲಕ್ ಲೇನ್ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು. ಮನೆ ಖಾಲಿ ಮಾಡಲು ಒಪ್ಪಿಗೆ ಸೂಚನೆ ನೀಡುತ್ತಿದ್ದಂತೆ ರಾಹುಲ್ ಗಾಂಧಿಗೆ ಪಕ್ಷದ ನಾಯಕರಿಂದ ಮನೆ ಆಫರ್ಗಳು ಹರಿದು ಬಂದಿತ್ತು.
ಆದರೆ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಜನಪಥ್ ನಿವಾಸಕ್ಕೆ ತೆರಳುತ್ತಿದ್ದಾರೆ. ಆದರೂ ರಾಹುಲ್ ಗಾಂಧಿ ಅವರು ಕೆಲವು ನಿಯಮಗಳ ಪ್ರಕಾರ ಬಂಗಲೆಯಿಂದ ಹೊರಹೋಗಬೇಕಾಗಿದೆ. ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಾಜಕೀಯ ಸೇಡಿನ ಆರೋಪ ಮಾಡಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಮನೆಯನ್ನು ಖಾಲಿಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತುಘಲಕ್ ಲೇನ್ನ ಬಂಗಲೆ ಹೊರಗೆ 2 ಟ್ರಕ್ಗಳಲ್ಲಿ ಕಾರ್ಮಿಕರು ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…