Advertisement
ಸುದ್ದಿಗಳು

2005ರಿಂದ ವಾಸವಿದ್ದ ಸರ್ಕಾರಿ ಬಂಗಲೆ ತೊರೆದ ರಾಹುಲ್ ಗಾಂಧಿ

Share

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಳಗ್ಗೆಯಿಂದ 2 ಬಾರಿ ಬಂಗಲೆಗೆ ಭೇಟಿ ನೀಡಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ರಾಹುಲ್ ಗಾಂಧಿ ಕೀಗಳನ್ನು ಹಸ್ತಾಂತರಿಸಿದ್ದಾರೆ.

2005 ರಿಂದ ರಾಹುಲ್ ಗಾಂಧಿ 12 ತುಘಲಕ್ ಲೇನ್ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಂಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಸಿ.ಆರ್. ಪಾಟೀಲ್ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು ಏಪ್ರಿಲ್ 22ರೊಳಗೆ ದೆಹಲಿಯಲ್ಲಿರುವ ತುಘಲಕ್ ಲೇನ್ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು. ಮನೆ ಖಾಲಿ ಮಾಡಲು ಒಪ್ಪಿಗೆ ಸೂಚನೆ ನೀಡುತ್ತಿದ್ದಂತೆ ರಾಹುಲ್ ಗಾಂಧಿಗೆ ಪಕ್ಷದ ನಾಯಕರಿಂದ ಮನೆ ಆಫರ್‌ಗಳು ಹರಿದು ಬಂದಿತ್ತು.

ಆದರೆ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಜನಪಥ್ ನಿವಾಸಕ್ಕೆ ತೆರಳುತ್ತಿದ್ದಾರೆ. ಆದರೂ ರಾಹುಲ್ ಗಾಂಧಿ ಅವರು ಕೆಲವು ನಿಯಮಗಳ ಪ್ರಕಾರ ಬಂಗಲೆಯಿಂದ ಹೊರಹೋಗಬೇಕಾಗಿದೆ. ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಾಜಕೀಯ ಸೇಡಿನ ಆರೋಪ ಮಾಡಿದ್ದಾರೆ.

ಕಳೆದ ವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಮನೆಯನ್ನು ಖಾಲಿಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತುಘಲಕ್ ಲೇನ್‍ನ ಬಂಗಲೆ ಹೊರಗೆ 2 ಟ್ರಕ್‍ಗಳಲ್ಲಿ ಕಾರ್ಮಿಕರು ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

6 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

12 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

21 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

23 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago